September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ


ಧರ್ಮಸ್ಥಳ : “ಜ್ಞಾನವೆಂಬುದು ಡಬ್ಬದಲ್ಲಿರುವ ಬಣ್ಣದಂತೆ. ಅದನ್ನು ಗೋಡೆಗೆ ಬಳಿದಾಗಲೇ ಅದರ ಮಹತ್ವ ತಿಳಿಯುವುದು. ಡಬ್ಬದಲ್ಲೇ ಇದ್ದರೆ ಅದರಿಂದ ಏನು ಪ್ರಯೋಜನವಿಲ್ಲ. ನಮ್ಮ ಜ್ಞಾನದಿಂದ ನಮ್ಮ ಸುತ್ತಲಿನ ಪ್ರದೇಶದಲ್ಲಿ ವಿವೇಕವೆಂಬ ಬಣ್ಣವನ್ನ ಬಳಿದಾಗ ಬದುಕು ಸಾರ್ಥಕತೆಯನ್ನು ಕಾಣುತ್ತದೆ. ಅಧ್ಯಾಪಕರು ಹೃದಯದಿಂದ ಹೃದಯಕ್ಕೆ ಸಂಧಿಸಿ ಪಾಠದ ಅಧ್ಯಯನ, ಅಧ್ಯಾಪನವನ್ನು ಮಾಡಬೇಕು. ಅವರ ನಿರಂತರ ಅಧ್ಯಯನ ಶೀಲತೆ ಅವರನ್ನು ಒಬ್ಬ ಯಶಸ್ವಿ ಅಧ್ಯಾಪಕನನ್ನಾಗಿ ಮಾಡಬಹುದು. ಅಧ್ಯಾಪಕರು ಹೊಸತನಕ್ಕೆ, ನಾವಿನ್ಯತೆಗೆ ತಮ್ಮನ್ನು ತಾವು ತೆರೆದುಕೊಂಡು, ಜ್ಞಾನದ ಹರಿವನ್ನು ವಿದ್ಯಾರ್ಥಿಗಳಲ್ಲಿ ವಿಸ್ತರಿಸುವ ಕಾರ್ಯವನ್ನು ಮಾಡಬೇಕು” ಎಂದು ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ ಇವರು ಹೇಳಿದರು.


ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಎಸ್. ಡಿ. ಎಮ್. ಶಿಕ್ಷಣ ಸಂಸ್ಥೆಗಳ 9 ಮತ್ತು 10ನೇ ತರಗತಿಗಳ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಕಾರ್ಯಾಗಾರದ ರೂಪುರೇಷೆಯನ್ನು ನೀಡಿದರು. ಬೋಧನೆಯಲ್ಲಿ ಚಟುವಟಿಕೆ ಸಹಿತ ಬೋಧನೆಯ ಮಹತ್ವವನ್ನು ತಿಳಿಯಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಎನ್ ಪದ್ಮರಾಜ್ ಇವರು ತರಗತಿಯನ್ನು ಆಕರ್ಷಕಗೊಳಿಸಲು ಚಟುವಟಿಕೆ ಆಧಾರಿತ ತರಬೇತಿ ಕಾರ್ಯಕ್ರಮಗಳು ಅನಿವಾರ್ಯ ಮತ್ತು ಇಂದಿನ ದಿನದಲ್ಲಿ ಕೋಣೆಯೊಳಗಿನ ತರಗತಿ ವಿದ್ಯಾರ್ಥಿಗಳಿಗೆ ಆಕರ್ಷಕವಾಗಲು ಹೊಸತನ ಅನಿವಾರ್ಯ ಎಂದರು.

ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ಸುಮಾರು 30 ಶಿಕ್ಷಕರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡರು. ಆಂಗ್ಲ ಮಾಧ್ಯಮ ಧರ್ಮಸ್ಥಳದ ಶ್ರೀಮತಿ ದಿವ್ಯ ಕನ್ನಡ ಭಾಷೆಯಲ್ಲಿ ಮಾದರಿ ತರಗತಿಯನ್ನು ನೀಡಿದರು. ಶಾಲಾ ಶಿಕ್ಷಕರಾದ ಜಯರಾಮ ಮಯ್ಯ ಸ್ವಾಗತಿಸಿ, ವಿಕಾಸ್ ಆರಿಗಾ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ್ ನಿರೂಪಿಸಿದರು.

Related posts

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಜ. 25: ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya
error: Content is protected !!