July 23, 2026
ಚಿತ್ರ ವರದಿವರದಿ

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಯಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ವಿನಯಚಂದ್ರ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.


ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ನಾರಾಯಣ ಫಡ್ಕೆಯವರು ದೀಪಾವಳಿ ಹಬ್ಬದ ಹಿನ್ನೆಲೆ, ಮಹತ್ವವನ್ನು ವಿವರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಭಕ್ತಿ ಗೀತೆಗಳು, ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.


ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಕನ್ನಡ ಮಾಧ್ಯಮ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು, ಭೋದಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಊರಿನ ಹಿರಿಯರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎನ್‌ಡಿಆರ್‌ಎಫ್ ಮಾಹಿತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!