38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) , 2.5 ಎನ್.ವಿ. ಜಿ. ಸುರತ್ಕಲ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.19 ರಂದು ಕೌಕ್ರಾಡಿ ಸಂತ ಜಾನರ ಶಾಲಾ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಫಾಯಲ್ ಸ್ಟ್ರೆಲ್ಲಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಆರೋಗ್ಯಾಧಿಕಾರಿ ಹಾಗೂ ವ್ಯವಸ್ಥಾಪನಾಧಿಕಾರಿ ಡಾ. ಹೇಮಚಂದ್ರ ಅವರು ಶಿಬಿರದ ಕುರಿತು ಮಾಹಿತಿ ನೀಡಿದರು.

ಜೇಸಿಐ ಕೊಕ್ಕಡ ಕಪಿಲಾ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ಧರ್ಮಗುರು ವಂ. ಜಗದೀಶ್ ಪಿಂಟೋ, ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎ. ಶೇಷಪ್ಪ ಗೌಡ, ನಿರ್ದೇಶಕ ಬಿ. ಶೇಷಪ್ಪ ಗೌಡ, ಕಾರ್ಯದರ್ಶಿ ಫೆಲ್ಸಿ ವೇಗಸ್, ದೇವಾಲಯದ ಆಯೋಗಗಳ ಸಂಯೋಜಕಿ ವಿನ್ನಿ ಫ್ರೆಡ್ , ಆರೋಗ್ಯ ಆಯೋಗದ ಸಂಚಾಲಕಿ ರೋಜಲಿನ್ ಪಾಯಸ್, ಕಾರ್ಮಿಕ ಆಯೋಗ ಸದಸ್ಯರು, ಕೊಕ್ಕಡ ಜೇಸಿಐ ಪದಾಧಿಕಾರಿಗಳು, ಪಾಲನಾ ಸಮಿತಿಯ ಉಪಾಧ್ಯಕ್ಷ ನೋಯೆಲ್ ಮೊಂತೆರೋ ಉಪಸ್ಥಿತರಿದ್ದರು.

ಅಪೋಲಿನಾ ಮಾರ್ಟಿಸ್ ಪ್ರಾರ್ಥಿಸಿದರು. ಯುವಜನ ಆಯೋಗದ ಸಂಚಾಲಕಿ ಜೆಸಿಂತಾ ಡಿ ಸೋಜ ಸ್ವಾಗತಿಸಿದರು. ಸಹನಾ ಮರಿಯಾ ನಿರೂಪಿಸಿದರು.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya
error: Content is protected !!