April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) , 2.5 ಎನ್.ವಿ. ಜಿ. ಸುರತ್ಕಲ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.19 ರಂದು ಕೌಕ್ರಾಡಿ ಸಂತ ಜಾನರ ಶಾಲಾ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಫಾಯಲ್ ಸ್ಟ್ರೆಲ್ಲಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಆರೋಗ್ಯಾಧಿಕಾರಿ ಹಾಗೂ ವ್ಯವಸ್ಥಾಪನಾಧಿಕಾರಿ ಡಾ. ಹೇಮಚಂದ್ರ ಅವರು ಶಿಬಿರದ ಕುರಿತು ಮಾಹಿತಿ ನೀಡಿದರು.

ಜೇಸಿಐ ಕೊಕ್ಕಡ ಕಪಿಲಾ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ಧರ್ಮಗುರು ವಂ. ಜಗದೀಶ್ ಪಿಂಟೋ, ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎ. ಶೇಷಪ್ಪ ಗೌಡ, ನಿರ್ದೇಶಕ ಬಿ. ಶೇಷಪ್ಪ ಗೌಡ, ಕಾರ್ಯದರ್ಶಿ ಫೆಲ್ಸಿ ವೇಗಸ್, ದೇವಾಲಯದ ಆಯೋಗಗಳ ಸಂಯೋಜಕಿ ವಿನ್ನಿ ಫ್ರೆಡ್ , ಆರೋಗ್ಯ ಆಯೋಗದ ಸಂಚಾಲಕಿ ರೋಜಲಿನ್ ಪಾಯಸ್, ಕಾರ್ಮಿಕ ಆಯೋಗ ಸದಸ್ಯರು, ಕೊಕ್ಕಡ ಜೇಸಿಐ ಪದಾಧಿಕಾರಿಗಳು, ಪಾಲನಾ ಸಮಿತಿಯ ಉಪಾಧ್ಯಕ್ಷ ನೋಯೆಲ್ ಮೊಂತೆರೋ ಉಪಸ್ಥಿತರಿದ್ದರು.

ಅಪೋಲಿನಾ ಮಾರ್ಟಿಸ್ ಪ್ರಾರ್ಥಿಸಿದರು. ಯುವಜನ ಆಯೋಗದ ಸಂಚಾಲಕಿ ಜೆಸಿಂತಾ ಡಿ ಸೋಜ ಸ್ವಾಗತಿಸಿದರು. ಸಹನಾ ಮರಿಯಾ ನಿರೂಪಿಸಿದರು.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!