23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) , 2.5 ಎನ್.ವಿ. ಜಿ. ಸುರತ್ಕಲ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.19 ರಂದು ಕೌಕ್ರಾಡಿ ಸಂತ ಜಾನರ ಶಾಲಾ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಫಾಯಲ್ ಸ್ಟ್ರೆಲ್ಲಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಆರೋಗ್ಯಾಧಿಕಾರಿ ಹಾಗೂ ವ್ಯವಸ್ಥಾಪನಾಧಿಕಾರಿ ಡಾ. ಹೇಮಚಂದ್ರ ಅವರು ಶಿಬಿರದ ಕುರಿತು ಮಾಹಿತಿ ನೀಡಿದರು.

ಜೇಸಿಐ ಕೊಕ್ಕಡ ಕಪಿಲಾ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ಧರ್ಮಗುರು ವಂ. ಜಗದೀಶ್ ಪಿಂಟೋ, ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎ. ಶೇಷಪ್ಪ ಗೌಡ, ನಿರ್ದೇಶಕ ಬಿ. ಶೇಷಪ್ಪ ಗೌಡ, ಕಾರ್ಯದರ್ಶಿ ಫೆಲ್ಸಿ ವೇಗಸ್, ದೇವಾಲಯದ ಆಯೋಗಗಳ ಸಂಯೋಜಕಿ ವಿನ್ನಿ ಫ್ರೆಡ್ , ಆರೋಗ್ಯ ಆಯೋಗದ ಸಂಚಾಲಕಿ ರೋಜಲಿನ್ ಪಾಯಸ್, ಕಾರ್ಮಿಕ ಆಯೋಗ ಸದಸ್ಯರು, ಕೊಕ್ಕಡ ಜೇಸಿಐ ಪದಾಧಿಕಾರಿಗಳು, ಪಾಲನಾ ಸಮಿತಿಯ ಉಪಾಧ್ಯಕ್ಷ ನೋಯೆಲ್ ಮೊಂತೆರೋ ಉಪಸ್ಥಿತರಿದ್ದರು.

ಅಪೋಲಿನಾ ಮಾರ್ಟಿಸ್ ಪ್ರಾರ್ಥಿಸಿದರು. ಯುವಜನ ಆಯೋಗದ ಸಂಚಾಲಕಿ ಜೆಸಿಂತಾ ಡಿ ಸೋಜ ಸ್ವಾಗತಿಸಿದರು. ಸಹನಾ ಮರಿಯಾ ನಿರೂಪಿಸಿದರು.

Related posts

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!