25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) , 2.5 ಎನ್.ವಿ. ಜಿ. ಸುರತ್ಕಲ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.19 ರಂದು ಕೌಕ್ರಾಡಿ ಸಂತ ಜಾನರ ಶಾಲಾ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಫಾಯಲ್ ಸ್ಟ್ರೆಲ್ಲಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಆರೋಗ್ಯಾಧಿಕಾರಿ ಹಾಗೂ ವ್ಯವಸ್ಥಾಪನಾಧಿಕಾರಿ ಡಾ. ಹೇಮಚಂದ್ರ ಅವರು ಶಿಬಿರದ ಕುರಿತು ಮಾಹಿತಿ ನೀಡಿದರು.

ಜೇಸಿಐ ಕೊಕ್ಕಡ ಕಪಿಲಾ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ಧರ್ಮಗುರು ವಂ. ಜಗದೀಶ್ ಪಿಂಟೋ, ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎ. ಶೇಷಪ್ಪ ಗೌಡ, ನಿರ್ದೇಶಕ ಬಿ. ಶೇಷಪ್ಪ ಗೌಡ, ಕಾರ್ಯದರ್ಶಿ ಫೆಲ್ಸಿ ವೇಗಸ್, ದೇವಾಲಯದ ಆಯೋಗಗಳ ಸಂಯೋಜಕಿ ವಿನ್ನಿ ಫ್ರೆಡ್ , ಆರೋಗ್ಯ ಆಯೋಗದ ಸಂಚಾಲಕಿ ರೋಜಲಿನ್ ಪಾಯಸ್, ಕಾರ್ಮಿಕ ಆಯೋಗ ಸದಸ್ಯರು, ಕೊಕ್ಕಡ ಜೇಸಿಐ ಪದಾಧಿಕಾರಿಗಳು, ಪಾಲನಾ ಸಮಿತಿಯ ಉಪಾಧ್ಯಕ್ಷ ನೋಯೆಲ್ ಮೊಂತೆರೋ ಉಪಸ್ಥಿತರಿದ್ದರು.

ಅಪೋಲಿನಾ ಮಾರ್ಟಿಸ್ ಪ್ರಾರ್ಥಿಸಿದರು. ಯುವಜನ ಆಯೋಗದ ಸಂಚಾಲಕಿ ಜೆಸಿಂತಾ ಡಿ ಸೋಜ ಸ್ವಾಗತಿಸಿದರು. ಸಹನಾ ಮರಿಯಾ ನಿರೂಪಿಸಿದರು.

Related posts

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!