22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) , 2.5 ಎನ್.ವಿ. ಜಿ. ಸುರತ್ಕಲ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.19 ರಂದು ಕೌಕ್ರಾಡಿ ಸಂತ ಜಾನರ ಶಾಲಾ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಫಾಯಲ್ ಸ್ಟ್ರೆಲ್ಲಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಆರೋಗ್ಯಾಧಿಕಾರಿ ಹಾಗೂ ವ್ಯವಸ್ಥಾಪನಾಧಿಕಾರಿ ಡಾ. ಹೇಮಚಂದ್ರ ಅವರು ಶಿಬಿರದ ಕುರಿತು ಮಾಹಿತಿ ನೀಡಿದರು.

ಜೇಸಿಐ ಕೊಕ್ಕಡ ಕಪಿಲಾ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ಧರ್ಮಗುರು ವಂ. ಜಗದೀಶ್ ಪಿಂಟೋ, ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎ. ಶೇಷಪ್ಪ ಗೌಡ, ನಿರ್ದೇಶಕ ಬಿ. ಶೇಷಪ್ಪ ಗೌಡ, ಕಾರ್ಯದರ್ಶಿ ಫೆಲ್ಸಿ ವೇಗಸ್, ದೇವಾಲಯದ ಆಯೋಗಗಳ ಸಂಯೋಜಕಿ ವಿನ್ನಿ ಫ್ರೆಡ್ , ಆರೋಗ್ಯ ಆಯೋಗದ ಸಂಚಾಲಕಿ ರೋಜಲಿನ್ ಪಾಯಸ್, ಕಾರ್ಮಿಕ ಆಯೋಗ ಸದಸ್ಯರು, ಕೊಕ್ಕಡ ಜೇಸಿಐ ಪದಾಧಿಕಾರಿಗಳು, ಪಾಲನಾ ಸಮಿತಿಯ ಉಪಾಧ್ಯಕ್ಷ ನೋಯೆಲ್ ಮೊಂತೆರೋ ಉಪಸ್ಥಿತರಿದ್ದರು.

ಅಪೋಲಿನಾ ಮಾರ್ಟಿಸ್ ಪ್ರಾರ್ಥಿಸಿದರು. ಯುವಜನ ಆಯೋಗದ ಸಂಚಾಲಕಿ ಜೆಸಿಂತಾ ಡಿ ಸೋಜ ಸ್ವಾಗತಿಸಿದರು. ಸಹನಾ ಮರಿಯಾ ನಿರೂಪಿಸಿದರು.

Related posts

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya
error: Content is protected !!