38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ಇದರ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಮದ್ದಡ್ಕ‌ ಜನಜಾಗೃತಿ ಜಾಥಾ ನ.19‌ರಂದು‌ ಮದ್ದಡ್ಕದಲ್ಲಿ ಜರಗಿತು.

ಜಾಥವನ್ನು ಹಸನ್ ಮುಬಾರಕ್ ಸಖಾಫಿ ಖತೀಬರು ನೂರಲ್ ಹುದಾ ಜಮಾ ಮಸೀದಿ ಮದ್ದಡ್ಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದ್ದಡ್ಕ ಮಸೀದಿಯ ಆಧ್ಯಕ್ಷ ಅಶ್ರಫ್ ಚಿಲಿಂಬಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಅರಕ್ಷಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಎ ಯಂ ತಮ್ಮ ಇಲಾಖೆಯು ಯಾವ ರೀತಿ ಕ್ರಮ ಕೈಗೊಳ್ಳುತ್ತೆ ಎಂದು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರೇರಣಾ ಬಾಷಣಗಾರರು ರಫೀಕ್ ಮಾಸ್ಟರ್ ಮಂಗಳೂರು ಅಗಮಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿ ಬಹಳಷ್ಟು ಸಣ್ಣ ಪ್ರಾಯದ ಯುವಕರು ಇಂತಹ ಮಾದಕ ದ್ರವ್ಯ ದುಷ್ಚಟಗಳಿಗೆ ಬಲಿಯಾಗುತ್ತಿದ್ದು ನಾವೆಲ್ಲರೂ ಇದಕ್ಕೆ ಕಡಿವಾಣ ಹಾಕಬೇಕಿದೆ ಎಲ್ಲರ ಸಹಕಾರ ಇರಲಿ ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಮದ್ದಡ್ಕ ಮಸೀದಿಯ ಗೌರವಾಧ್ಯಕ್ಷ ಎಸ್ ಎ ರಾಝೀಯುದ್ದೀನ್ ಸಬರಬೈಲು, ಪ್ರಧಾನ ಕಾರ್ಯದರ್ಶಿ ಎಮ್ ಸಿರಾಜ್ ಚಿಲಿಂಬಿ, ಕೋಶಾಧಿಕಾರಿ ರಿಯಾಝ್ ಸಬರಬೈಲು, ಉಪಾಧ್ಯಕ್ಷ ಸ್ವಾಲಿಹ್ ಮದ್ದಡ್ಕ, ಅನ್ವರುಲ್ ಹಿದಾಯ ಮದರಸ ಪಾದೆ ಅಧ್ಯಕ್ಷ ಆರೀಸ್ ಶಾಪಿ, ಎಸ್ ವೈ ಎಸ್ ಆಲಂದಿಲ ಘಟಕ ಅಧ್ಯಕ್ಷ ಅಬುಸಾಲಿಹ್ , ಮುರ್ಶಿದುಲ್ ಅನಾಂ ಅರಬಿಕ್ ಸ್ಕೂಲ್ ಆಲಂದಿಲ ಅಧ್ಯಕ್ಷ ರಮ್ಲ ಕೆಲ್ಲಾರ್ , ಕುವೆಟ್ಟು ಗ್ರಾ ಪಂ ಸದಸ್ಯರಾದ ಮುಸ್ತಾಫ ಜಿಕೆ, ರಿಯಾಝ್ ಮದ್ದಡ್ಕ, ಮದ್ದಡ್ಕ ಟಿ ಆರ್ ಯಂ (ರಿ) ಅಧ್ಯಕ್ಷ ಹೈದರ್ ಎಚ್ ಎಸ್ . , ಹೆಲ್ಪ್ ಲೈನ್ ಮದ್ದಡ್ಕ ಅಧ್ಯಕ್ಷ ಶಾಕೀರ್ ಚಿಲಿಂಬಿ, ಹಾಜಿ ಉಸ್ಮಾನ್ ಆಲಂದಿಲ ಬ್ಲಾಕ್ ಅಧ್ಯಕ್ಷರು ಕೆ ಯಂ ಜೆ. ಇಲ್ಯಾಸ್ ಚಿಲಿಂಬಿ ಅಧ್ಯಕ್ಣರು ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಘಟಕ, ಅಶ್ರಫ್ ಅಧ್ಯಕ್ಷರು ಎಸ್ ಎಸ್ ಎಫ್ ಮದ್ದಡ್ಕ ಘಟಕ, ಯಂ ಎಚ್ ಅಬೂಬಕ್ಕರ್ ಅಧ್ಯಕ್ಷರು ಎಸ್ ವೈ ಎಸ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು ಸಿರಾಜ್ ಚಿಲಿಂಬಿ ಸ್ವಾಗತಿಸಿ, ಸ್ವಾಲಿಹ್ ವಂದಿಸಿದರು.

Related posts

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!