22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

ಬೆಳ್ತಂಗಡಿ : ವಿಶ್ವಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬೃಹತ್ ಪ್ರತಿಭಟನೆಯು ನ.20 ರಂದು ನಡೆಯಿತು.

ಪ್ರತಿಭಟನಾಗಾರರು ಆಡಳಿತ ಸೌಧದ ವಠಾರದಲ್ಲಿ ಧರಣಿ ನಡೆಸಿ ಹಿಂದೂ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.

ಬಳಿಕ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರವರಿಗೆ ಉಪ ತಹಶೀಲ್ದಾರ್ ಜಯ ಕೆ. ರವರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರುಗಳಾದ ದಿನೇಶ್ ಚಾರ್ಮಾಡಿ, ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್, ಸಂಚಾಲಕ ಸಂತೋಷ್ ಅತ್ತಾಜೆ, ಜಿಲ್ಲಾ ಪ್ರಮುಖರುಗಳಾದ ತಿಲಕ್ ಹಾಗೂ ಗಣೇಶ್ ಕಳೆಂಜ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya
error: Content is protected !!