April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶದ ಸಂದರ್ಭದಲ್ಲಿ ಅಣಬೆ ಕೃಷಿ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಕೊಲ್ಲಿಮಾರು ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಸುಲೈಮಾನ್ ಭೀಮಂಡೆಯವರು ಆಗಮಿಸಿದ್ದು, ಅಣಬೆ ಕೃಷಿಯ ಮಾಹಿತಿಯೊಂದಿಗೆ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅತ್ಯಂತ ಸುಲಭ ಮತ್ತು ಕಡಿಮೆ ವೆಚ್ಚದಲ್ಲಿ, ಮನೆ ಬಳಕೆ ಹಾಗೂ ಆರ್ಥಿಕ ದೃಷ್ಟಿಕೋನದಿಂದಲೂ ಮಾಡಬಹುದಾದ ಕೃಷಿಯೆಂದರೆ ಅಣಬೆ ಬೇಸಾಯ ಮಾತ್ರ ಎನ್ನುತ್ತಾ ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಬಹಳಷ್ಟು ಮಂದಿ ಪೋಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕರಾದ ಶಿಕ್ಷಕರಾದ ಗಣೇಶ್ವರ ರವರು ಸ್ವಾಗತಿಸಿ, ಕೋಕಿಲಾರವರು ವಂದಿಸಿದರು, ಸುಮನ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya
error: Content is protected !!