23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

ಬೆಳ್ತಂಗಡಿ: ಮಂಗಳೂರಿನ ಯೂಟ್ಯೂಬ್ ಚಾನಲ್ ನಲ್ಲಿ ಗಿರೀಶ್ ಮಟ್ಟಣ್ಣನವರ ಸಂದರ್ಶನ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರನ್ನು ನಿಂದಿಸಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ .ನ. 18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ Human Rights news world tv ಚಾನೆಲ್ ನವರು, ಗಿರೀಶ್ ಮಟ್ಟಣ್ಣನವರ್ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ‘ಜೈನ ಧರ್ಮದ ಜನರನ್ನು ನಿಂದಿಸಿ ವೇದವಳ್ಳಿ ಹಿಂದೂ, ಪದ್ಮಲತಾ ಹಿಂದೂ, ಮಾವುತ ನಾರಾಯಣ ಹಿಂದೂ, ಯಮುನಾ ಹಿಂದೂ, ಸೌಜನ್ಯ ಹಿಂದೂ, ಸತ್ತಂತಹ ಸಾಕ್ಷಿಗಳು ರವಿ ಪೂಜಾರಿ ಹಿಂದೂ ಎಲ್ಲರೂ ಹಿಂದೂಗಳೇ. ಉಳಿದವರು ಯಾರು? ಇದ್ದವರು ಯಾರು? ಜೈನರು ತಾನೆ?. ಕೊಲೆಯಾಗುತ್ತಿರುವವರು ಯಾರು? ಹಿಂದೂಗಳು, ಕೊಲೆ ಮಾಡಿಸುತ್ತಾ ಇದ್ದವರು ಯಾರು ಜೈನರು ತಾನೆ’ ಎಂದು ಹೇಳಿಕೆ ನೀಡಿ ಒಂದು ಧರ್ಮವನ್ನು ಇನ್ನೊಂದು ಧರ್ಮದ ವಿರುದ್ಧ ಎತ್ತಿಕಟ್ಟಿ ಸಮಾಜದ ಸ್ವಾಸ್ಥವನ್ನು ಕೆಡಿಸುವ ವಿಡಿಯೋವನ್ನು ಹರಿಬಿಟ್ಟು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಯಾನೆ ಅನಿತಾ ಕಾಸರಗೋಡು ಕೂಡಾ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಲ್ಲಿ ಅಡಳಿತ ನಡೆಸುತ್ತಿರುವ ಜೈನ ಧರ್ಮಿಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅವರ ಕುಟುಂಬದ ಬಗ್ಗೆ ಹಾಗೂ ಜೈನ ಧರ್ಮದ ಆಚರಣೆಯ ಬಗ್ಗೆ ಸದಾ ಅವಹೇಳಕಾರಿಯಾಗಿ ಮಾತಾನಾಡಿರುವ ಅವರುಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಭಾರತೀಯ ಜೈನ್ ಮಿಲನ್ ಅಧ್ಯಕ್ಷರಾದ ಡಾ.ನವೀನ್ ಕುಮಾರ್ ಮತ್ತು ಸದಸ್ಯರು ದೂರು ನೀಡಿದ್ದರು. ದೂರನ್ನು ಸ್ವೀಕರಿಸಿದ ಬೆಳ್ತಂಗಡಿ ಪೊಲೀಸರು ಗಿರೀಶ್ ಮಟ್ಟಣ್ಣವರು ಮತ್ತು ರಾಧಿಕಾ ಕಾಸರಗೋಡು ವಿರುದ್ಧ ಐಪಿಸಿ 1860 (u/s -153A,298) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಅರಸಿನಮಕ್ಕಿ: ಹೊಸ್ತೋಟ ಶಾಲೆಗೆ ಕ್ರೀಡಾ ಉಪಕರಣಗಳ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!