23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

ಉಜಿರೆ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಮತ್ತು ಶ್ರೀ.ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಮಾರ್ಗದರ್ಶನ ನೀಡುವ ಸಲುವಾಗಿ “ವೃತ್ತಿ ಮಾರ್ಗದರ್ಶನ” ಎಂಬ ಕಾರ್ಯಕ್ರಮವನ್ನು ನ.18 ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿ ಉಪನ್ಯಾಸಕ ರೊನಾಲ್ಡ್ ಪಿಂಟೊ ವಿದ್ಯಾರ್ಥಿಗಳಿಗೆ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳ ಉದ್ಯೋಗ ಅವಕಾಶಗಳ ಕುರಿತು ಮಾಹಿತಿಯ ಜೊತೆಗೆ ತಮಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ ಎಂದು ತಿಳಿದು ಆ ವಿಷಯದಲ್ಲಿ ಉನ್ನತ ವಿದ್ಯಾಭ್ಯಾಸವನ್ನು ಹೊಂದುವುದು ಸೂಕ್ತ ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಕೆ.ಜಿ ಹಾಗೂ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ ಮುಖ್ಯೋಪಾಧ್ಯಾಯರಾದ ಸುರೇಶ್ ಇವರು ಉಪಸ್ಥಿತರಿದ್ದರು. ಶಿಕ್ಷಕಿ ಕಲ್ಯಾಣಿ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya
error: Content is protected !!