27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ಎಲ್ಲರ ಗಮನವನ್ನು ಸೆಳೆದಿದ್ದರು.


ಇಂದು ಅವರ ಮದುವೆಯು ಸೌತಡ್ಕ ಶ್ರೀ ಗಣೇಶ್ ಕಲಾಮಂದಿರದಲ್ಲಿ ನಡೆದಿದ್ದು ಮದುವೆ ಮಂಟಪವನ್ನು ಮೋದಿಮಯವಾಗಿ ಪರಿವರ್ತಿಸಿ, ತಮ್ಮ ಅಭಿಮಾನವನ್ನು ತೋಪ೯ಡಿಸಿ, ಎಲ್ಲರ ಪ್ರಶಂಸೆಗೆ ಪಾತ್ರರಾದರು.
ಶಿಶಿಲ ಗ್ರಾಮದ ದೇನೋಡಿ ತಿಲಕ್ ಯುವ ಬ್ರಿಗೇಡ್‌ನಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ಮೋದಿಯವರ ಕಟ್ಟಾ ಅಭಿಯಾನಿಯಾಗಿರುವ ಇವರು ಸಭಾಂಗಣದ ಸುತ್ತಲ್ಲೂ ಮೋದಿಯವರ ಪೋಸ್ಟರ್ ಗಳನ್ನು ಹಾಕಿದ್ದು, ಸಭಾಂಗಣದ ಮುಂದೆ ಮೋದಿಯವರ ಮೂರ್ತಿಯನ್ನು ಸಹ ಇಟ್ಟಿದ್ದರು. ಅದರಲ್ಲಿ “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶವನ್ನು ಹಾಕಲಾಗಿತ್ತು.

Related posts

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!