April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

ಬಳಂಜ: ಭಾ. ಕೃ. ಅ. ಪ. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬಳಂಜ ಗ್ರಾಮದ ಜಗದೀಶ್ ರೈ ಅವರ ತೋಟದಲ್ಲಿ ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ ಜರುಗಿತು.

ಹುಳಿ ಮಣ್ಣಿನ ದುಷ್ಪರಿಣಾಮಗಳನ್ನು ತಗ್ಗಿಸಿ ಎಲ್ಲಾ ರೀತಿಯ ಪೋಷಕಾಂಶಗಳ ಲಭ್ಯತೆಯನ್ನು ಹೆಚ್ಚಿಸಲು ಮಣ್ಣಿನ ರಸಸಾರದ ಆಧಾರದ ಮೇಲೆ ಡೋಲೋಮೈಟ್ ಬಳಕೆ ಅವಶ್ಯಕ ಎಂದು ಅದರ ಪ್ರಯೋಜನಗಳ ಕುರಿತು ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್. ರೈತರಿಗೆ ತಿಳಿಸಿದರು.

ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಕೇದಾರನಾಥ ಅಡಿಕೆ ಬೆಳೆಯಲ್ಲಿ ಕಂಡು ಬರುವ ರೋಗಗಳು ಮತ್ತು ಅವುಗಳ ನಿರ್ವಹಣೆಗಾಗಿ ಬಳಸುವ ಶಿಲೀಂದ್ರನಾಶಕಗಳ ಕುರಿತು ಮಾಹಿತಿ ನೀಡಿದರು.

ನಂತರ ಆಯ್ದ ಹತ್ತು ಜನ ರೈತರಿಗೆ ಅವಶ್ಯಕ ಕೃಷಿ ಪರಿಕರಗಳನ್ನು ನೀಡಿ ಅವರ ತೋಟಗಳಲ್ಲಿ ಕ್ಷೇತ್ರ ಪರಿಶೀಲನೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಸುರೇಶ್ ಶೆಟ್ಟಿ, ಜಗದೀಶ್ ರೈ, ರಮೇಶ್ ಪೂಜಾರಿ, ಪ್ರಶಾಂತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related posts

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya
error: Content is protected !!