September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

ಬಳಂಜ: ಭಾ. ಕೃ. ಅ. ಪ. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬಳಂಜ ಗ್ರಾಮದ ಜಗದೀಶ್ ರೈ ಅವರ ತೋಟದಲ್ಲಿ ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ ಜರುಗಿತು.

ಹುಳಿ ಮಣ್ಣಿನ ದುಷ್ಪರಿಣಾಮಗಳನ್ನು ತಗ್ಗಿಸಿ ಎಲ್ಲಾ ರೀತಿಯ ಪೋಷಕಾಂಶಗಳ ಲಭ್ಯತೆಯನ್ನು ಹೆಚ್ಚಿಸಲು ಮಣ್ಣಿನ ರಸಸಾರದ ಆಧಾರದ ಮೇಲೆ ಡೋಲೋಮೈಟ್ ಬಳಕೆ ಅವಶ್ಯಕ ಎಂದು ಅದರ ಪ್ರಯೋಜನಗಳ ಕುರಿತು ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್. ರೈತರಿಗೆ ತಿಳಿಸಿದರು.

ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಕೇದಾರನಾಥ ಅಡಿಕೆ ಬೆಳೆಯಲ್ಲಿ ಕಂಡು ಬರುವ ರೋಗಗಳು ಮತ್ತು ಅವುಗಳ ನಿರ್ವಹಣೆಗಾಗಿ ಬಳಸುವ ಶಿಲೀಂದ್ರನಾಶಕಗಳ ಕುರಿತು ಮಾಹಿತಿ ನೀಡಿದರು.

ನಂತರ ಆಯ್ದ ಹತ್ತು ಜನ ರೈತರಿಗೆ ಅವಶ್ಯಕ ಕೃಷಿ ಪರಿಕರಗಳನ್ನು ನೀಡಿ ಅವರ ತೋಟಗಳಲ್ಲಿ ಕ್ಷೇತ್ರ ಪರಿಶೀಲನೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಸುರೇಶ್ ಶೆಟ್ಟಿ, ಜಗದೀಶ್ ರೈ, ರಮೇಶ್ ಪೂಜಾರಿ, ಪ್ರಶಾಂತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related posts

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
error: Content is protected !!