25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ, 2023 – 24ನೇ ಸಾಲಿನ ರೋವರ್ಸ್ ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಜರುಗಿತು.

ಸಮಾರಂಭದ ಉದ್ಘಾಟಕರಾಗಿರುವ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್(ರಿ) ಬೆಳ್ತಂಗಡಿ , ಇಲ್ಲಿನ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕೆ ವಸಂತ ಬಂಗೇರ , ಇವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಲು ಇದು ಸ್ಪೂರ್ತಿಯಾಗಿದೆ . ತನ್ನನ್ನು ತಾನು ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದರ ಜೊತೆಗೆ ಇತರರಿಗೆ ಹೇಗೆ ಮಾದರಿಯಾಗಬೇಕು. ಜೊತೆಗೆ ದೇಶ ಪ್ರೇಮ, ಭಕ್ತಿ , ನಡವಳಿಕೆ ಮತ್ತು ಸೇವೆ ಇವೆಲ್ಲವನ್ನು ರೋವರ್ಸ್ ರೇಂಜರ್ಸ್ ಕಲಿಯಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ರಾಕೇಶ್ ಕುಮಾರ್ ಇವರು ರೋವರ್ಸ್ ರೇಂಜರ್ಸ್ ಘಟಕದ ಕುರಿತು ಸಂಪೂರ್ಣವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಅದರ ಪ್ರಯೋಜನವನ್ನು ವಿದ್ಯಾರ್ಥಿಗಳು ಹೇಗೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ. ಸವಿತಾ,, ಇವರು ವಹಿಸಿ ವಿದ್ಯಾರ್ಥಿಗಳಿಗೆ ಧೈರ್ಯ, ಸೇವೆ, ಮತ್ತು ನಿಸ್ವಾರ್ಥವನ್ನು ಬೆಳೆಸಿಕೊಳ್ಳಲು ಸಾಧ್ಯ. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ನಾಯಕತ್ವವನ್ನು ನಿಷ್ಠೆಯಿಂದ ನಿರ್ವಹಿಸಲು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಪ್ರಾಂಶುಪಾಲೆ ಡಾ. ಸವಿತಾ ಪ್ರತಿಜ್ಞಾವಿಧಿ ಬೋಧಿಸಿದರು. ರೋವರ್ಸ್ ಘಟಕದ ನಾಯಕನಾದ ಪ್ರೀತಮ್ ಲೋಬೋ, ರೇಂಜರ್ಸ್ ಘಟಕದ ನಾಯಕಿಯಾದ ದೀಕ್ಷಾ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಪವಿತ್ರ ನಿರೂಪಿಸಿ, ಸತೀಶ ಸ್ವಾಗತಿಸಿ, ಶ್ರೀಮತಿ ಶ್ರೀಜಾ ವಂದಿಸಿದರು.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya
error: Content is protected !!