September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

ಬೆಳ್ತಂಗಡಿ : ಇಲ್ಲಿಯ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ, 2023 – 24ನೇ ಸಾಲಿನ ರೋವರ್ಸ್ ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಜರುಗಿತು.

ಸಮಾರಂಭದ ಉದ್ಘಾಟಕರಾಗಿರುವ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್(ರಿ) ಬೆಳ್ತಂಗಡಿ , ಇಲ್ಲಿನ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಕೆ ವಸಂತ ಬಂಗೇರ , ಇವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಯನ್ನು ಮಾಡಲು ಇದು ಸ್ಪೂರ್ತಿಯಾಗಿದೆ . ತನ್ನನ್ನು ತಾನು ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದರ ಜೊತೆಗೆ ಇತರರಿಗೆ ಹೇಗೆ ಮಾದರಿಯಾಗಬೇಕು. ಜೊತೆಗೆ ದೇಶ ಪ್ರೇಮ, ಭಕ್ತಿ , ನಡವಳಿಕೆ ಮತ್ತು ಸೇವೆ ಇವೆಲ್ಲವನ್ನು ರೋವರ್ಸ್ ರೇಂಜರ್ಸ್ ಕಲಿಯಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ರಾಕೇಶ್ ಕುಮಾರ್ ಇವರು ರೋವರ್ಸ್ ರೇಂಜರ್ಸ್ ಘಟಕದ ಕುರಿತು ಸಂಪೂರ್ಣವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಅದರ ಪ್ರಯೋಜನವನ್ನು ವಿದ್ಯಾರ್ಥಿಗಳು ಹೇಗೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ. ಸವಿತಾ,, ಇವರು ವಹಿಸಿ ವಿದ್ಯಾರ್ಥಿಗಳಿಗೆ ಧೈರ್ಯ, ಸೇವೆ, ಮತ್ತು ನಿಸ್ವಾರ್ಥವನ್ನು ಬೆಳೆಸಿಕೊಳ್ಳಲು ಸಾಧ್ಯ. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ನಾಯಕತ್ವವನ್ನು ನಿಷ್ಠೆಯಿಂದ ನಿರ್ವಹಿಸಲು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ಪ್ರಾಂಶುಪಾಲೆ ಡಾ. ಸವಿತಾ ಪ್ರತಿಜ್ಞಾವಿಧಿ ಬೋಧಿಸಿದರು. ರೋವರ್ಸ್ ಘಟಕದ ನಾಯಕನಾದ ಪ್ರೀತಮ್ ಲೋಬೋ, ರೇಂಜರ್ಸ್ ಘಟಕದ ನಾಯಕಿಯಾದ ದೀಕ್ಷಾ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಪವಿತ್ರ ನಿರೂಪಿಸಿ, ಸತೀಶ ಸ್ವಾಗತಿಸಿ, ಶ್ರೀಮತಿ ಶ್ರೀಜಾ ವಂದಿಸಿದರು.

Related posts

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಡ್ರ್ಯಾಗನ್ ಫ್ರೂಟ್ಸ್ ವಿತರಣೆ

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya
error: Content is protected !!