38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

ಬೆಳ್ತಂಗಡಿ: ಅಭಿವೃದ್ಧಿಯ ಮಂತ್ರದೊಂದಿಗೆ ಧಾರ್ಮಿಕ ಶ್ರದ್ದಾ ಕೇಂದ್ರಗಳ ಗತ ವೈಭವಕ್ಕೆ ಸಂಕಲ್ಪತೊಟ್ಟು ನಾಡಿನ ಮೂರು ದೇವಸ್ಥಾನಗಳಿಗೆ ಗುಜರಾತ್ ನ ಪ್ರಸಿದ್ದ ಉದ್ಯಮಿ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಶಶಿಧರ ಬಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರು ರೂ.30 ಲಕ್ಷ ದೇಣಿಗೆ ನೀಡಿ ಸಹಕರಿಸಿದ್ದಾರೆ.

ಶ್ರೀ ವೀರಾಂಜನೆಯ ಸ್ವಾಮಿ ದೇವಸ್ಥಾನ ಅಡ್ಯಾರು ಮಂಗಳೂರು ಕ್ಷೇತ್ರಕ್ಕೆ ರೂ- 20 ಲಕ್ಷ,ಮುಂಡೆತ್ತಾಯ ದೇವಸ್ಥಾನ ಕೊಡೆಕ್ಕಲ್ ಅಳಪೆ ಕಣ್ಣೂರು ರೂ- 5 ಲಕ್ಷ ಮತ್ತು ಕೃಷ್ಣ ಗೋಕುಲ ಗೋಪಾಲಕೃಷ್ಣ ಟ್ರಸ್ಟ್‌ ಮುಂಬಯಿ ರೂ- 5 ಲಕ್ಷ ದೇಣಿಗೆ ನೀಡಿ ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸಿದ್ದಾರೆ.

ಶಶಿಧರ ಬಿ ಶೆಟ್ಟಿಯವರು ಉದ್ಯಮದೊಂದಿಗೆ ಸಮಾಜಮುಖಿ ಚಿಂತನೆಯ ಮೂಲಕ ಗುರುತಿಸಿಕೊಂಡಿದ್ದಾರೆ. ವಿಶೇಷವಾಗಿ ಬೆಳ್ತಂಗಡಿ ತಾಲೂಕಿನ ಹಲವಾರು ದೈವಸ್ಥಾನ, ದೇವಸ್ಥಾನಗಳ ಜಿರ್ಣೋದ್ಧಾರ, ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ,ಕಲೆ, ಸಾಹಿತ್ಯ ಕ್ಷೇತ್ರಗಳಿಗೆ ದೇಣಿಗೆ ನೀಡುವುದರೊಂದಿಗೆ ಮತ್ತು ದಾನ ಧರ್ಮಗಳ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಸಾವಿರಾರು ಯುವಕರಿಗೆ ಉದ್ಯೋಗದಾತರಾಗಿ, ಹೊಸ ಅಲೋಚನೆಯ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.

Related posts

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!