25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

ಬೆಳ್ತಂಗಡಿ: ಅಭಿವೃದ್ಧಿಯ ಮಂತ್ರದೊಂದಿಗೆ ಧಾರ್ಮಿಕ ಶ್ರದ್ದಾ ಕೇಂದ್ರಗಳ ಗತ ವೈಭವಕ್ಕೆ ಸಂಕಲ್ಪತೊಟ್ಟು ನಾಡಿನ ಮೂರು ದೇವಸ್ಥಾನಗಳಿಗೆ ಗುಜರಾತ್ ನ ಪ್ರಸಿದ್ದ ಉದ್ಯಮಿ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಶಶಿಧರ ಬಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರು ರೂ.30 ಲಕ್ಷ ದೇಣಿಗೆ ನೀಡಿ ಸಹಕರಿಸಿದ್ದಾರೆ.

ಶ್ರೀ ವೀರಾಂಜನೆಯ ಸ್ವಾಮಿ ದೇವಸ್ಥಾನ ಅಡ್ಯಾರು ಮಂಗಳೂರು ಕ್ಷೇತ್ರಕ್ಕೆ ರೂ- 20 ಲಕ್ಷ,ಮುಂಡೆತ್ತಾಯ ದೇವಸ್ಥಾನ ಕೊಡೆಕ್ಕಲ್ ಅಳಪೆ ಕಣ್ಣೂರು ರೂ- 5 ಲಕ್ಷ ಮತ್ತು ಕೃಷ್ಣ ಗೋಕುಲ ಗೋಪಾಲಕೃಷ್ಣ ಟ್ರಸ್ಟ್‌ ಮುಂಬಯಿ ರೂ- 5 ಲಕ್ಷ ದೇಣಿಗೆ ನೀಡಿ ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸಿದ್ದಾರೆ.

ಶಶಿಧರ ಬಿ ಶೆಟ್ಟಿಯವರು ಉದ್ಯಮದೊಂದಿಗೆ ಸಮಾಜಮುಖಿ ಚಿಂತನೆಯ ಮೂಲಕ ಗುರುತಿಸಿಕೊಂಡಿದ್ದಾರೆ. ವಿಶೇಷವಾಗಿ ಬೆಳ್ತಂಗಡಿ ತಾಲೂಕಿನ ಹಲವಾರು ದೈವಸ್ಥಾನ, ದೇವಸ್ಥಾನಗಳ ಜಿರ್ಣೋದ್ಧಾರ, ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ,ಕಲೆ, ಸಾಹಿತ್ಯ ಕ್ಷೇತ್ರಗಳಿಗೆ ದೇಣಿಗೆ ನೀಡುವುದರೊಂದಿಗೆ ಮತ್ತು ದಾನ ಧರ್ಮಗಳ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಸಾವಿರಾರು ಯುವಕರಿಗೆ ಉದ್ಯೋಗದಾತರಾಗಿ, ಹೊಸ ಅಲೋಚನೆಯ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.

Related posts

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
error: Content is protected !!