26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

ಬೆಳ್ತಂಗಡಿ: ಅಭಿವೃದ್ಧಿಯ ಮಂತ್ರದೊಂದಿಗೆ ಧಾರ್ಮಿಕ ಶ್ರದ್ದಾ ಕೇಂದ್ರಗಳ ಗತ ವೈಭವಕ್ಕೆ ಸಂಕಲ್ಪತೊಟ್ಟು ನಾಡಿನ ಮೂರು ದೇವಸ್ಥಾನಗಳಿಗೆ ಗುಜರಾತ್ ನ ಪ್ರಸಿದ್ದ ಉದ್ಯಮಿ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಶಶಿಧರ ಬಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರು ರೂ.30 ಲಕ್ಷ ದೇಣಿಗೆ ನೀಡಿ ಸಹಕರಿಸಿದ್ದಾರೆ.

ಶ್ರೀ ವೀರಾಂಜನೆಯ ಸ್ವಾಮಿ ದೇವಸ್ಥಾನ ಅಡ್ಯಾರು ಮಂಗಳೂರು ಕ್ಷೇತ್ರಕ್ಕೆ ರೂ- 20 ಲಕ್ಷ,ಮುಂಡೆತ್ತಾಯ ದೇವಸ್ಥಾನ ಕೊಡೆಕ್ಕಲ್ ಅಳಪೆ ಕಣ್ಣೂರು ರೂ- 5 ಲಕ್ಷ ಮತ್ತು ಕೃಷ್ಣ ಗೋಕುಲ ಗೋಪಾಲಕೃಷ್ಣ ಟ್ರಸ್ಟ್‌ ಮುಂಬಯಿ ರೂ- 5 ಲಕ್ಷ ದೇಣಿಗೆ ನೀಡಿ ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸಿದ್ದಾರೆ.

ಶಶಿಧರ ಬಿ ಶೆಟ್ಟಿಯವರು ಉದ್ಯಮದೊಂದಿಗೆ ಸಮಾಜಮುಖಿ ಚಿಂತನೆಯ ಮೂಲಕ ಗುರುತಿಸಿಕೊಂಡಿದ್ದಾರೆ. ವಿಶೇಷವಾಗಿ ಬೆಳ್ತಂಗಡಿ ತಾಲೂಕಿನ ಹಲವಾರು ದೈವಸ್ಥಾನ, ದೇವಸ್ಥಾನಗಳ ಜಿರ್ಣೋದ್ಧಾರ, ಬ್ರಹ್ಮಕಲಶೋತ್ಸವ ಹಾಗೂ ವಿವಿಧ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ,ಕಲೆ, ಸಾಹಿತ್ಯ ಕ್ಷೇತ್ರಗಳಿಗೆ ದೇಣಿಗೆ ನೀಡುವುದರೊಂದಿಗೆ ಮತ್ತು ದಾನ ಧರ್ಮಗಳ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಸಾವಿರಾರು ಯುವಕರಿಗೆ ಉದ್ಯೋಗದಾತರಾಗಿ, ಹೊಸ ಅಲೋಚನೆಯ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ.

Related posts

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya
error: Content is protected !!