April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

ಹೊಸಂಗಡಿ:ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇವರ ಆಶ್ರಯದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2023 – 24 ಕಾರ್ಯಕ್ರಮದಡಿಯಲ್ಲಿ, ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ( ರಿ)ಮಂಗಳೂರು, ಗ್ರಾಮ ಸಮಿತಿ, ಹೊಸಂಗಡಿ ಮತ್ತು ಫ್ರೆಂಡ್ಸ್ ಕ್ಲಬ್ ( ರಿ) ಹೊಸಂಗಡಿ ಇವರ ಸಹಭಾಗಿತ್ವದೊಂದಿಗೆ, ಫ್ರೆಂಡ್ಸ್ ಕ್ಲಬ್ ಸಭಾಭವನ, ಹೊಸಂಗಡಿಯಲ್ಲಿ, ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿಗಳಾದ ಡಾ. ರಶ್ಮಿ ಆರ್. ರವರು ಭಾಗವಹಿಸಿ ಬೆಂಡೆ ಬೆಳೆಯ ಸಮಗ್ರ ನಿರ್ವಹಣೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿಗಳಾದ ಡಾ. ಕೇದಾರನಾಥ ಇವರು, ಬೆಂಡೆ ಗಿಡಗಳಿಗೆ ರೋಗ ಹರಡುವಿಕೆ, ಕೀಟನಾಶಕ ನಿರ್ವಹಣೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿಯಾದ ಮಲ್ಲಿಕಾರ್ಜುನ ಎಲ್. ಮಣ್ಣು ಸಂರಕ್ಷಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇದರ ಅಧ್ಯಕ್ಷರಾದ ಶ್ರೀಪತಿ ಉಪಧ್ಯಾಯ ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕರಾದ ವಿಜಯ ಗ್ರಾಮ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು, ಗ್ರಾಮ ಸಮಿತಿ ಹೊಸಂಗಡಿ ಇದರ ಅಧ್ಯಕ್ಷರಾದ ಹರಿಪ್ರಸಾದ್ ಪಿ. ಇವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 30 ರೈತರು ಭಾಗವಹಿಸಿದ್ದು, ಆಯ್ದ ಹತ್ತು ರೈತರಿಗೆ ಬೆಂಡೆ ಬೀಜ ಮತ್ತು ಕೃಷಿ ಪರಿಕರಗಳನ್ನು ವಿತರಿಸಲಾಯಿತು.

Related posts

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿನಿಯೋಗಿಸಿರುವ ಅನುದಾನವೆಷ್ಟು,? ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!