ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ, ಬೆಳ್ತಂಗಡಿ, ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನ. 19 ರಂದು ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ, ಉಪಾಧ್ಯಕ್ಷರಾಗಿ ರಾಮು ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ವಿ. ಧರ್ಮಸ್ಥಳ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್, ಕೋಶಾಧಿಕಾರಿಯಾಗಿ ಜಿನ್ನು ಕರಿಮಣೇಲು, ಗೌರವಾಧ್ಯಕ್ಷರಾಗಿ ರಾಘವ ಕಲ್ಮಂಜ ಗೌರವ ಸಲಹೆಗಾರಗಾಗಿ ಅಮ್ಮು ಕುಮಾರ್ ಅಳದಂಗಡಿ, ಗೋಪಾಲಕೃಷ್ಣ ಕುಕ್ಕಳ, ಶೇಖರ್ ಕುಕ್ಕೇಡಿ ಹಾಗೂ ಚೆನ್ನಪ್ಪ ಮಡಂತ್ಯಾರು, ಇವರುಗಳು ಆಯ್ಕೆಯಾದರು.

Leave a Comment

error: Content is protected !!