23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟ( ರಿ)ಇಳಂತಿಲ ಇದರ ವಾರ್ಷಿಕ ಮಹಾಸಭೆಯನ್ನು ನ.21 ರಂದು ಇಳಂತಿಲ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟನೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸವಿತಾ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂಜೀವ ನಾಯ್ಕ್ ಪ್ರಾಸ್ತಾವಿಕ ಮಾತುಗಳನಾಡಿದರು. ಒಕ್ಕೂಟವು ಒಳ್ಳೆಯ ರೀತಿಯಲ್ಲಿ ಮುಂದುವರಿಯಲಿ ಎಂದು ಶುಭಹಾರೈಸಿದರು.

ರಾಜ್ಯ ಪ್ರಶಸ್ತಿ ಪಡೆದ Nrlm ಬ್ಲಾಕ್ ಮ್ಯಾನೇಜರ್ ನಿತೀಶ್ ರವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು. Nrlm ಸಂಜೀವಿನಿ ಯ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾ ಶ್ರೀ ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಯನ್ನು ನೆರವೇರಿಸಿದರು. ಒಕ್ಕೂಟ ಅಧ್ಯಕ್ಷರು ನಮ್ಮ ಒಕ್ಕೂಟ ಲಾಭದಾಯಕ ರೀತಿಯಲ್ಲಿ ಸಾಗುತಿದೆ. ಅದೇ ರೀತಿ ಇನ್ನು ಮುಂದೆ ಯೂ ಮುಂದುವರಿಯಲಿ. ಸರಕಾರದ ಅನುದಾನಗಳನ್ನು ಸೂಕ್ತ ರೀತಿಯಲ್ಲಿ ಸದಸ್ಯರೆಲ್ಲರೂ ಬಳಸಿಕೊಂಡು. ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಎಂದು ಹಿತ ನುಡಿಗಳನ್ನಾಡಿದರು.

ಶ್ರೀಮತಿ ಶ್ರೀದೇವಿ ಮತ್ತು ಶ್ರೀಮತಿ ನಮಿತಾ ಪ್ರಾರ್ಥನೆ ಹಾಡಿದರು. ಎಮ್.ಬಿ.ಕೆ ಪವಿತ್ರ ಕಾರ್ಯಕ್ರಮ ನಿರೂಪಿಸಿದರು. ಎಲ್.ಸಿ.ಆರ್ ಪಿ ಚೇತನಾ ಸ್ವಾಗತಿಸಿದರು. ಎಲ್.ಸಿ.ಆರ್ ಪಿ ಶಾಲಿನಿ ವರದಿ ಮಂಡನೆ ಮಾಡಿದರು. ಎಮ್.ಬಿ.ಕೆ ಪವಿತ್ರ ಜಮಾ ಖರ್ಚು ವಿವರ ಮಂಡಿಸಿದರು. ಸಂಘ ದ ಸದಸ್ಯೆ ಶ್ರೀಮತಿ ಅಕ್ಷತ ಧನ್ಯವಾದವಿತ್ತರು.

Related posts

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya
error: Content is protected !!