25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟ( ರಿ)ಇಳಂತಿಲ ಇದರ ವಾರ್ಷಿಕ ಮಹಾಸಭೆಯನ್ನು ನ.21 ರಂದು ಇಳಂತಿಲ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟನೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸವಿತಾ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂಜೀವ ನಾಯ್ಕ್ ಪ್ರಾಸ್ತಾವಿಕ ಮಾತುಗಳನಾಡಿದರು. ಒಕ್ಕೂಟವು ಒಳ್ಳೆಯ ರೀತಿಯಲ್ಲಿ ಮುಂದುವರಿಯಲಿ ಎಂದು ಶುಭಹಾರೈಸಿದರು.

ರಾಜ್ಯ ಪ್ರಶಸ್ತಿ ಪಡೆದ Nrlm ಬ್ಲಾಕ್ ಮ್ಯಾನೇಜರ್ ನಿತೀಶ್ ರವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು. Nrlm ಸಂಜೀವಿನಿ ಯ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾ ಶ್ರೀ ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಯನ್ನು ನೆರವೇರಿಸಿದರು. ಒಕ್ಕೂಟ ಅಧ್ಯಕ್ಷರು ನಮ್ಮ ಒಕ್ಕೂಟ ಲಾಭದಾಯಕ ರೀತಿಯಲ್ಲಿ ಸಾಗುತಿದೆ. ಅದೇ ರೀತಿ ಇನ್ನು ಮುಂದೆ ಯೂ ಮುಂದುವರಿಯಲಿ. ಸರಕಾರದ ಅನುದಾನಗಳನ್ನು ಸೂಕ್ತ ರೀತಿಯಲ್ಲಿ ಸದಸ್ಯರೆಲ್ಲರೂ ಬಳಸಿಕೊಂಡು. ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಎಂದು ಹಿತ ನುಡಿಗಳನ್ನಾಡಿದರು.

ಶ್ರೀಮತಿ ಶ್ರೀದೇವಿ ಮತ್ತು ಶ್ರೀಮತಿ ನಮಿತಾ ಪ್ರಾರ್ಥನೆ ಹಾಡಿದರು. ಎಮ್.ಬಿ.ಕೆ ಪವಿತ್ರ ಕಾರ್ಯಕ್ರಮ ನಿರೂಪಿಸಿದರು. ಎಲ್.ಸಿ.ಆರ್ ಪಿ ಚೇತನಾ ಸ್ವಾಗತಿಸಿದರು. ಎಲ್.ಸಿ.ಆರ್ ಪಿ ಶಾಲಿನಿ ವರದಿ ಮಂಡನೆ ಮಾಡಿದರು. ಎಮ್.ಬಿ.ಕೆ ಪವಿತ್ರ ಜಮಾ ಖರ್ಚು ವಿವರ ಮಂಡಿಸಿದರು. ಸಂಘ ದ ಸದಸ್ಯೆ ಶ್ರೀಮತಿ ಅಕ್ಷತ ಧನ್ಯವಾದವಿತ್ತರು.

Related posts

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಬಳಂಜ ಕರ್ಮಂದೊಟ್ಟು ಪರಿಸರದಲ್ಲಿ ಧರೆ ಕುಸಿತ: ಅಪಾಯದಲ್ಲಿ ಕೆಲವು ಮನೆಗಳು, ಬಳಂಜ ಗ್ರಾ.ಪಂ. ನಲ್ಲಿ ತಾತ್ಕಾಲಿಕ ವ್ಯವಸ್ಥೆ, 4 ಕುಟುಂಬಗಳು, 16 ಜನ ಸ್ಥಳಾಂತರ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!