22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟ( ರಿ)ಇಳಂತಿಲ ಇದರ ವಾರ್ಷಿಕ ಮಹಾಸಭೆಯನ್ನು ನ.21 ರಂದು ಇಳಂತಿಲ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟನೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸವಿತಾ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂಜೀವ ನಾಯ್ಕ್ ಪ್ರಾಸ್ತಾವಿಕ ಮಾತುಗಳನಾಡಿದರು. ಒಕ್ಕೂಟವು ಒಳ್ಳೆಯ ರೀತಿಯಲ್ಲಿ ಮುಂದುವರಿಯಲಿ ಎಂದು ಶುಭಹಾರೈಸಿದರು.

ರಾಜ್ಯ ಪ್ರಶಸ್ತಿ ಪಡೆದ Nrlm ಬ್ಲಾಕ್ ಮ್ಯಾನೇಜರ್ ನಿತೀಶ್ ರವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು. Nrlm ಸಂಜೀವಿನಿ ಯ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾ ಶ್ರೀ ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಯನ್ನು ನೆರವೇರಿಸಿದರು. ಒಕ್ಕೂಟ ಅಧ್ಯಕ್ಷರು ನಮ್ಮ ಒಕ್ಕೂಟ ಲಾಭದಾಯಕ ರೀತಿಯಲ್ಲಿ ಸಾಗುತಿದೆ. ಅದೇ ರೀತಿ ಇನ್ನು ಮುಂದೆ ಯೂ ಮುಂದುವರಿಯಲಿ. ಸರಕಾರದ ಅನುದಾನಗಳನ್ನು ಸೂಕ್ತ ರೀತಿಯಲ್ಲಿ ಸದಸ್ಯರೆಲ್ಲರೂ ಬಳಸಿಕೊಂಡು. ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಎಂದು ಹಿತ ನುಡಿಗಳನ್ನಾಡಿದರು.

ಶ್ರೀಮತಿ ಶ್ರೀದೇವಿ ಮತ್ತು ಶ್ರೀಮತಿ ನಮಿತಾ ಪ್ರಾರ್ಥನೆ ಹಾಡಿದರು. ಎಮ್.ಬಿ.ಕೆ ಪವಿತ್ರ ಕಾರ್ಯಕ್ರಮ ನಿರೂಪಿಸಿದರು. ಎಲ್.ಸಿ.ಆರ್ ಪಿ ಚೇತನಾ ಸ್ವಾಗತಿಸಿದರು. ಎಲ್.ಸಿ.ಆರ್ ಪಿ ಶಾಲಿನಿ ವರದಿ ಮಂಡನೆ ಮಾಡಿದರು. ಎಮ್.ಬಿ.ಕೆ ಪವಿತ್ರ ಜಮಾ ಖರ್ಚು ವಿವರ ಮಂಡಿಸಿದರು. ಸಂಘ ದ ಸದಸ್ಯೆ ಶ್ರೀಮತಿ ಅಕ್ಷತ ಧನ್ಯವಾದವಿತ್ತರು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!