23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟ( ರಿ)ಇಳಂತಿಲ ಇದರ ವಾರ್ಷಿಕ ಮಹಾಸಭೆಯನ್ನು ನ.21 ರಂದು ಇಳಂತಿಲ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟನೆ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸವಿತಾ ನೆರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂಜೀವ ನಾಯ್ಕ್ ಪ್ರಾಸ್ತಾವಿಕ ಮಾತುಗಳನಾಡಿದರು. ಒಕ್ಕೂಟವು ಒಳ್ಳೆಯ ರೀತಿಯಲ್ಲಿ ಮುಂದುವರಿಯಲಿ ಎಂದು ಶುಭಹಾರೈಸಿದರು.

ರಾಜ್ಯ ಪ್ರಶಸ್ತಿ ಪಡೆದ Nrlm ಬ್ಲಾಕ್ ಮ್ಯಾನೇಜರ್ ನಿತೀಶ್ ರವರನ್ನು ಒಕ್ಕೂಟದ ಪರವಾಗಿ ಸನ್ಮಾನಿಸಲಾಯಿತು. Nrlm ಸಂಜೀವಿನಿ ಯ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾ ಶ್ರೀ ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಯನ್ನು ನೆರವೇರಿಸಿದರು. ಒಕ್ಕೂಟ ಅಧ್ಯಕ್ಷರು ನಮ್ಮ ಒಕ್ಕೂಟ ಲಾಭದಾಯಕ ರೀತಿಯಲ್ಲಿ ಸಾಗುತಿದೆ. ಅದೇ ರೀತಿ ಇನ್ನು ಮುಂದೆ ಯೂ ಮುಂದುವರಿಯಲಿ. ಸರಕಾರದ ಅನುದಾನಗಳನ್ನು ಸೂಕ್ತ ರೀತಿಯಲ್ಲಿ ಸದಸ್ಯರೆಲ್ಲರೂ ಬಳಸಿಕೊಂಡು. ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಎಂದು ಹಿತ ನುಡಿಗಳನ್ನಾಡಿದರು.

ಶ್ರೀಮತಿ ಶ್ರೀದೇವಿ ಮತ್ತು ಶ್ರೀಮತಿ ನಮಿತಾ ಪ್ರಾರ್ಥನೆ ಹಾಡಿದರು. ಎಮ್.ಬಿ.ಕೆ ಪವಿತ್ರ ಕಾರ್ಯಕ್ರಮ ನಿರೂಪಿಸಿದರು. ಎಲ್.ಸಿ.ಆರ್ ಪಿ ಚೇತನಾ ಸ್ವಾಗತಿಸಿದರು. ಎಲ್.ಸಿ.ಆರ್ ಪಿ ಶಾಲಿನಿ ವರದಿ ಮಂಡನೆ ಮಾಡಿದರು. ಎಮ್.ಬಿ.ಕೆ ಪವಿತ್ರ ಜಮಾ ಖರ್ಚು ವಿವರ ಮಂಡಿಸಿದರು. ಸಂಘ ದ ಸದಸ್ಯೆ ಶ್ರೀಮತಿ ಅಕ್ಷತ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!