ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

Updated on:

ಇಂದಬೆಟ್ಟು: ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಇದರಂತೆ ಇಂದಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ (101ವರ್ಷ) ರವರಿಗೆ ಇಂದಬೆಟ್ಟು ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಅವರಿಗೆ ಪ್ರಮಾಣ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮಾಜಿ ಅಧ್ಯಕ್ಷ ಅನಂದ ಅಡಿಲು, ಪಂಚಾಯತ್ ಸದಸ್ಯರಾದ ಶ್ರೀಕಾಂತ್ ಎಸ್ ಇಂದಬೆಟ್ಟು, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಬಂಗಾಡಿ ಅರಮನೆಯ
ಯಶೋಧರ ಬಲ್ಲಾಳ್, ನವೀನ್ ಜೈನ್ ಇಂದಬೆಟ್ಟು ಉಪಸ್ಥಿತರಿದ್ದರು.

Leave a Comment

error: Content is protected !!