ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು.

ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಡಿ.ಎಮ್ ಐಟಿಐ ಕಾಲೇಜು ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಕೆ.ಆರ್, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ ಭಾಗವಹಿಸಿದರು.

ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜು ವ್ಯವಸ್ಥಾಪಕ ಚಂದ್ರನಾಥ್ ಜೈನ್ ವಿಭಾಗ ಮುಖ್ಯಸ್ಥ ಶ್ರೇಯಾಂಕ್ ಜೈನ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೆಕ್ಯಾನಿಕಲ್ ಇಂಜಿನಿಯರ್ ವಿಭಾಗದ ಸಂಚಾಲಕ ಶಿವರಾಜ್ ವಿ. ಸ್ವಾಗತಿಸಿ, ಉಪನ್ಯಾಸಕ ಪದ್ಮರಾಜ್ ಅಣ್ಣಾಜಿ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯಾಂತ್ರಿಕ ಕಾರ್ಯಾಗಾರ ಪ್ರದರ್ಶನ ನಡೆಯಿತು. ಉಪನ್ಯಾಸಕ ಸಾಯಿಚರಣ್ ವಂದಿಸಿದರು.

Leave a Comment

error: Content is protected !!