ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗಳಿಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನ 20 ರಂದು ಚಾಲನೆ ನೀಡಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್‌, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ ಬೆಳಾಲು, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರಾದ ಶರತ್ ಕುಮಾರ್ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು, ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Comment

error: Content is protected !!