September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿ ಅಂತರ್ ಕಾಲೇಜು ಪಿಯುಸಿ ವಿಭಾಗ ಮಟ್ಟದ ವಾಣಿಜ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆ UNITUS 2K23 ನಡೆಯಿತು.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸ್ಟಾರ್ ಸುವರ್ಣ ಕಾಮಿಡಿ ಗ್ಯಾಂಗ್ ನ ಕಲಾವಿದರಾದ  ಅಕ್ಷಯ್ ಸರಿಪಳ್ಳ ಆಗಮಿಸಿ ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ. ಫಾ. ವಲೇರಿಯನ್ ಫೆರ್ನಾಂಡಿಸ್, ಕಾಲೇಜಿನ ಪ್ರಾಂಶುಪಾಲರಾದ ವಂ|ಡಾ.ಆಲ್ವಿನ್ ಸೆರಾವೋ, ನಾರಾವಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂಜಯ್ ಮಿರಾಂದ ,ಕಾರ್ಯದರ್ಶಿಯಾದ ಶ್ರೀಮತಿ ಎವ್ಜಿನ್ ಫೆರ್ನಾಂಡಿಸ್, ಉಪ ಪ್ರಾಂಶುಪಾಲರಾದ ಶ್ರೀ. ಸಂತೋಷ್ ಸಲ್ಡಾನ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಸಾಂಸ್ಕೃತಿಕ  ಸಂಘದ ಸಂಯೋಜಕರಾದ ಅವಿಲ್ ಮೊರಸ್, ವಾಣಿಜ್ಯ ಸಂಘದ ಸಂಯೋಜಕರಾದ  ಸಂತೋಷ್ ಮತ್ತು ಅವಿನಾಶ್ ಲೋಬೊ, ವಿದ್ಯಾರ್ಥಿ ಸಂಘದ ನಾಯಕ ಕೇಶವ್ ಶರ್ಮ ಮತ್ತು ವಾಣಿಜ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಸೋಹನ್ ಮತ್ತು ಕು. ಶೈನಿ ಹಾಗೂ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಅಶ್ವತ್ ಮತ್ತು ಕು. ಸುಚಿತ್ರಾ ಉಪಸ್ಥಿತರಿದ್ದರು.

12 ಕಾಲೇಜಿನಿಂದ ವಿವಿಧ ಸ್ಪರ್ಧೆಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು. ಪ್ರಸನ್ನ ಪದವಿ ಪೂರ್ವ ಕಾಲೇಜು ಸಮಗ್ರ ವಿಭಾಗದಲ್ಲಿ ಮೊದಲ ಸ್ಥಾನವನ್ನು ಗಳಿಸಿತು ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಪಡೆದುಕೊಂಡಿತು.

Related posts

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya
error: Content is protected !!