25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಪೃಥ್ವಿ ಸಾನಿಕಂ ಅವರು 2022ರ ಜೂನ್ 28ರಿಂದ 2023ರ ಫೆಬ್ರವರಿ 2ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ ವಿಧಾನಸಭಾ ಚುನಾವಣೆಯ ಹಿನ್ನೆೆಲೆಯಲ್ಲಿ ಹರಿಹರಕ್ಕೆ ವರ್ಗಾವಣೆಗೊಂಡಿದ್ದರು. ಇವರ ವರ್ಗಾವಣೆಯ ಬಳಿಕ ಸಚ್ಚಿದಾನಂದ ಎಸ್. ಕುಚನೂರು ಬಳಿಕ ಟಿ.ಸುರೇಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿಯಲ್ಲಿ ತಾಲೂಕು ತಹಸೀಲ್ದಾರ್ ಮತ್ತು ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾಾರೆ. ಬೆಳ್ತಂಗಡಿ ತಾಲೂಕಿನ 52ನೇ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಲಿರುವ ಚಿತ್ರದುರ್ಗ ಜಿಲ್ಲೆೆಯ ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿಯೂ ಆಗಿದ್ದಾರೆ. ನಿರ್ಗಮಿತ ತಹಸೀಲ್ದಾರ್ ಟಿ.ಸುರೇಶ್ ಕುಮರ್ ಅವರು ಪೃಥ್ವಿ ಸಾನಿಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya
error: Content is protected !!