25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಪೃಥ್ವಿ ಸಾನಿಕಂ ಅವರು 2022ರ ಜೂನ್ 28ರಿಂದ 2023ರ ಫೆಬ್ರವರಿ 2ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ ವಿಧಾನಸಭಾ ಚುನಾವಣೆಯ ಹಿನ್ನೆೆಲೆಯಲ್ಲಿ ಹರಿಹರಕ್ಕೆ ವರ್ಗಾವಣೆಗೊಂಡಿದ್ದರು. ಇವರ ವರ್ಗಾವಣೆಯ ಬಳಿಕ ಸಚ್ಚಿದಾನಂದ ಎಸ್. ಕುಚನೂರು ಬಳಿಕ ಟಿ.ಸುರೇಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿಯಲ್ಲಿ ತಾಲೂಕು ತಹಸೀಲ್ದಾರ್ ಮತ್ತು ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾಾರೆ. ಬೆಳ್ತಂಗಡಿ ತಾಲೂಕಿನ 52ನೇ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಲಿರುವ ಚಿತ್ರದುರ್ಗ ಜಿಲ್ಲೆೆಯ ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿಯೂ ಆಗಿದ್ದಾರೆ. ನಿರ್ಗಮಿತ ತಹಸೀಲ್ದಾರ್ ಟಿ.ಸುರೇಶ್ ಕುಮರ್ ಅವರು ಪೃಥ್ವಿ ಸಾನಿಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya
error: Content is protected !!