April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಪೃಥ್ವಿ ಸಾನಿಕಂ ಅವರು 2022ರ ಜೂನ್ 28ರಿಂದ 2023ರ ಫೆಬ್ರವರಿ 2ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ ವಿಧಾನಸಭಾ ಚುನಾವಣೆಯ ಹಿನ್ನೆೆಲೆಯಲ್ಲಿ ಹರಿಹರಕ್ಕೆ ವರ್ಗಾವಣೆಗೊಂಡಿದ್ದರು. ಇವರ ವರ್ಗಾವಣೆಯ ಬಳಿಕ ಸಚ್ಚಿದಾನಂದ ಎಸ್. ಕುಚನೂರು ಬಳಿಕ ಟಿ.ಸುರೇಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿಯಲ್ಲಿ ತಾಲೂಕು ತಹಸೀಲ್ದಾರ್ ಮತ್ತು ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾಾರೆ. ಬೆಳ್ತಂಗಡಿ ತಾಲೂಕಿನ 52ನೇ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಲಿರುವ ಚಿತ್ರದುರ್ಗ ಜಿಲ್ಲೆೆಯ ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿಯೂ ಆಗಿದ್ದಾರೆ. ನಿರ್ಗಮಿತ ತಹಸೀಲ್ದಾರ್ ಟಿ.ಸುರೇಶ್ ಕುಮರ್ ಅವರು ಪೃಥ್ವಿ ಸಾನಿಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya
error: Content is protected !!