ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಪೃಥ್ವಿ ಸಾನಿಕಂ ಅವರು 2022ರ ಜೂನ್ 28ರಿಂದ 2023ರ ಫೆಬ್ರವರಿ 2ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ ವಿಧಾನಸಭಾ ಚುನಾವಣೆಯ ಹಿನ್ನೆೆಲೆಯಲ್ಲಿ ಹರಿಹರಕ್ಕೆ ವರ್ಗಾವಣೆಗೊಂಡಿದ್ದರು. ಇವರ ವರ್ಗಾವಣೆಯ ಬಳಿಕ ಸಚ್ಚಿದಾನಂದ ಎಸ್. ಕುಚನೂರು ಬಳಿಕ ಟಿ.ಸುರೇಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿಯಲ್ಲಿ ತಾಲೂಕು ತಹಸೀಲ್ದಾರ್ ಮತ್ತು ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾಾರೆ. ಬೆಳ್ತಂಗಡಿ ತಾಲೂಕಿನ 52ನೇ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಲಿರುವ ಚಿತ್ರದುರ್ಗ ಜಿಲ್ಲೆೆಯ ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿಯೂ ಆಗಿದ್ದಾರೆ. ನಿರ್ಗಮಿತ ತಹಸೀಲ್ದಾರ್ ಟಿ.ಸುರೇಶ್ ಕುಮರ್ ಅವರು ಪೃಥ್ವಿ ಸಾನಿಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya
error: Content is protected !!