23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

ಬೆಳ್ತಂಗಡಿ: ವಿದ್ಯುತ್ ಖಾಸಗೀಕರಣ ನಿಲ್ಲಿಸಿ ವಿದ್ಯುತ್ ತಿದ್ದುಪಡಿ ಮಸೂದೆ 2022 ನ್ನು ಹಿಂಪಡೆಯಿರಿ ಎಂದು ವಿದ್ಯುತ್ ಮಾರಾಟ ಮಾಡುವ ಕೇಂದ್ರ ಸರಕಾರ ಜನವಿರೋಧಿ ಧೋರಣೆ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ, ಸಮಾನ ಮನಸ್ಕ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಜಂಟಿ ಪ್ರತಿಭಟನೆಯು ನ.22 ರಂದು ಮೆಸ್ಕಾಂ ಕಚೇರಿ ಎದುರು ನಡೆಯಿತು.

ಬೆಳ್ತಂಗಡಿ ನಿಲ್ದಾಣದಿಂದ ಮೆಸ್ಕಾಂ ಕಚೇರಿ ತನಕ ಕೇಂದ್ರ ಸರಕಾರ ನಡೆಯನ್ನು ಖಂಡಿಸಿ ಕಾಲ್ನಡಿಗೆ ಜಾಥಾ ನಡೆಯಿತು.

ನಂತರ ಮೆಸ್ಕಾಂ ಇಲಾಖೆಯ ಪ್ರಭಾರ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ರಕ್ಸ್ ರವರ್ ಮೂಲಕ ಮನವಿಯನ್ನು ಪ್ರಧಾನಿ ಮೋದಿಯವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಸಿಪಿಎಂ ಮುಖಂಡ ಬಿ.ಎಂ ಭಟ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ನಾಗೇಶ್, ಸತೀಶ್ ಕಾಶಿಪಟ್ಣ , ಜಯವಿಕ್ರಮ ಕಲ್ಲಾಪು, ಉಷಾ ಶರತ್, ಧರಣೇಂದ್ರ ಕುಮಾರ್, ಕರ್ನಾಟಕ ರೈತ ಸಂಘದ ಸಂಚಾಲಕ ಆದಿತ್ಯ ನಾರಾಯಣ್ ಕೊಲ್ಲಾಜೆ, ಕಾಂಗ್ರೇಸ್ ಪಕ್ಷದ ವಿವಿಧ ಘಟಕದ ಅಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya
error: Content is protected !!