25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

ಬೆಳ್ತಂಗಡಿ: ವಿದ್ಯುತ್ ಖಾಸಗೀಕರಣ ನಿಲ್ಲಿಸಿ ವಿದ್ಯುತ್ ತಿದ್ದುಪಡಿ ಮಸೂದೆ 2022 ನ್ನು ಹಿಂಪಡೆಯಿರಿ ಎಂದು ವಿದ್ಯುತ್ ಮಾರಾಟ ಮಾಡುವ ಕೇಂದ್ರ ಸರಕಾರ ಜನವಿರೋಧಿ ಧೋರಣೆ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ, ಸಮಾನ ಮನಸ್ಕ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಜಂಟಿ ಪ್ರತಿಭಟನೆಯು ನ.22 ರಂದು ಮೆಸ್ಕಾಂ ಕಚೇರಿ ಎದುರು ನಡೆಯಿತು.

ಬೆಳ್ತಂಗಡಿ ನಿಲ್ದಾಣದಿಂದ ಮೆಸ್ಕಾಂ ಕಚೇರಿ ತನಕ ಕೇಂದ್ರ ಸರಕಾರ ನಡೆಯನ್ನು ಖಂಡಿಸಿ ಕಾಲ್ನಡಿಗೆ ಜಾಥಾ ನಡೆಯಿತು.

ನಂತರ ಮೆಸ್ಕಾಂ ಇಲಾಖೆಯ ಪ್ರಭಾರ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ರಕ್ಸ್ ರವರ್ ಮೂಲಕ ಮನವಿಯನ್ನು ಪ್ರಧಾನಿ ಮೋದಿಯವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಸಿಪಿಎಂ ಮುಖಂಡ ಬಿ.ಎಂ ಭಟ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ನಾಗೇಶ್, ಸತೀಶ್ ಕಾಶಿಪಟ್ಣ , ಜಯವಿಕ್ರಮ ಕಲ್ಲಾಪು, ಉಷಾ ಶರತ್, ಧರಣೇಂದ್ರ ಕುಮಾರ್, ಕರ್ನಾಟಕ ರೈತ ಸಂಘದ ಸಂಚಾಲಕ ಆದಿತ್ಯ ನಾರಾಯಣ್ ಕೊಲ್ಲಾಜೆ, ಕಾಂಗ್ರೇಸ್ ಪಕ್ಷದ ವಿವಿಧ ಘಟಕದ ಅಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya
error: Content is protected !!