April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

ಬೆಳ್ತಂಗಡಿ: ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಸಂಬಂಧಪಟ್ಟವರಿಗೆ ತಿಳಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಇದಕ್ಕೆ ಸ್ಪಂದಿಸಿದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಗರಿ ಅವರಿಗೆ ಪತ್ರಮುಖೇನ ತಿಳಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಎ.ಕೆ ವರ್ಗೀಸ್, ಕಾರ್ಯದರ್ಶಿ ಪ್ರಶಾಂತ್ ಸಿ.ಎಚ್, ಜೊತೆ ಕಾರ್ಯದರ್ಶಿ ಉಷಾ ಅಂಚನ್, ಕೋಶಾಧಿಕಾರಿ ಸತೀಶ್ ಭಟ್, ಸಮಿತಿಯ ಸದಸ್ಯರಾದ ವಿ.ಜೆ ಜೋಸೆಫ್, ರಫೀಕ್ ಸೀಗಲ್, ಇಬ್ರಾಹಿಂ ಎಂ.ಕೆ ಜೊತೆಗಿದ್ದರು.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya
error: Content is protected !!