22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ಕಾಲೇಜಿನಲ್ಲಿ ಜರಗಿತು.
ಸಭೆಯ ತೀರ್ಮಾನದಂತೆ ದಶಂಬರ 17 ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಮ್ಮೇಳನ ಜರಗಲಿದೆ.

ಸುವರ್ಣ ಕರ್ನಾಟಕ ವರ್ಷವಾದದ್ದರಿಂದ ಸಮಗ್ರ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಅಭಿಪ್ರಾಯ ಪಡೆಯಲಾಯಿತು. ಅದರಂತೆ ಸುವರ್ಣ ಕರ್ನಾಟಕ ಸಾಹಿತ್ಯ ಭಾಷೆ ಸಂಸ್ಕೃತಿಯ ಕುರಿತಾದ ಸಂವಾದ ಗೋಷ್ಠಿ, ಜ್ಞಾನಪೀಠ ಪುರಸ್ಕೃತರ ನೆನಪು, ಯುವ ಕವಿಗೋಷ್ಠಿ, ಸನ್ಮಾನ ಕಾರ್ಯಕ್ರಮಗಳ ಜೊತೆಗೆ ಯಕ್ಷಗಾನ ಗಾಯನ ವೈವಿಧ್ಯ, ಕನ್ನಡ ಗೀತೆಗಳ ಗಾಯನ, ಕನ್ನಡ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಸಮ್ಮೇಳನದೊಂದಿಗೆ ಅಳವಡಿಸಲಾಗುವುದೆಂದು ಅಭಿಪ್ರಾಯ ಪಡಲಾಯಿತು. ಜೊತೆಗೆ ಉದ್ಘಾಟನೆ, ಚಾರುಮುಡಿ ಸಂಚಿಕೆ ಬಿಡುಗಡೆ, ಸನ್ಮಾನ ಮತ್ತು ಸಮಾರೋಪಗಳೊಂದಿಗೆ ಸಮ್ಮೇಳನವನ್ನು ಸರಳವಾಗಿ, ಅರ್ಥಪೂರ್ಣವಾಗಿ ಸಂಘಟಿಸುವ ಬಗ್ಗೆ ಚರ್ಚಿಸಲಾಯಿತು.

ಈ ಸಂಬಂಧವಾಗಿ ಸಮ್ಮೇಳನದ ಸಂಯೋಜನಾ ಸಮಿತಿಯ ಮತ್ತು ವಿವಿಧ ಉಪ ಸಮಿತಿಗಳ ರಚನೆಗಾಗಿ ಬೆಳ್ತಂಗಡಿಯ ಸಂಘಸಂಸ್ಥೆಗಳ, ಪ್ರಮುಖರ ಸಭೆಯನ್ನು ಶೀಘ್ರದಲ್ಲೆ ಕರೆದು ಸಮಿತಿಯನ್ನು ಅಂತಿಮಗೊಳಿಸಲಾಗುವುದೆಂದು ಅಧ್ಯಕ್ಷರಾದ ಯದುಪತಿ ಗೌಡರು ತಿಳಿಸಿದರು.

ಸಭೆಯನ್ನು ಉದ್ದೇಶಿಸಿ ನಿವೃತ್ತ ಪ್ರಾಚಾರ್ಯರಾದ ಗಣಪತಿ ಭಟ್ ಕುಳಮರ್ವರವರು ಮಾತನಾಡುತ್ತಾ ; ಸಾಹಿತ್ಯ ಸಂಸ್ಕೃತಿ, ಭಾಷೆ ಶಿಕ್ಷಣ ಇವೆಲ್ಲ ಬದುಕಿನಲ್ಲಿ ಜೊತೆಯಾಗಿರುವ ವಿಷಯಗಳು. ಈ ಹಿನ್ನೆಲೆಯಲ್ಲಿ ಆಯೋಜನೆಗೊಳ್ಳುವ ತಾಲೂಕಿನ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ತೇರನೆಳೆಯೋಣ ಬನ್ನಿ, ಸಣ್ಣ ಪುಟ್ಟ ಲೋಪಗಳನ್ನು ಮೀರಿ ಸಮ್ಮೇಳನವನ್ನು ಎಲ್ಲರೂ ಜೊತೆ ಸೇರಿ ಯಶಸ್ವಿಗೊಳಿಸೋಣವೆಂದು ಕರೆ ನೀಡಿದರು.

ಸಭೆಯಲ್ಲಿ ಏ. ಕೃಷ್ಣಪ್ಪ ಪೂಜಾರಿ ಬೆಳ್ತಂಗಡಿ, ಲಕ್ಷ್ಮೀನಾರಾಯಣ ಕೆ., ಶೀಲಾ ಎಸ್ ಹೆಗ್ಡೆ ವೇಣೂರು, ಬಿ ಲಕ್ಷ್ಮಣ ಪೂಜಾರಿ, ವಸಂತ ಶೆಟ್ಟಿ ಮಡಂತ್ಯಾರು, ಮೀನಾಕ್ಷಿ ಗುರುವಾಯನಕೆರೆ, ವಸಂತಿ ಟಿ ನಿಡ್ಲೆ, ಗಂಗಾರಾಣಿ ಜೋಷಿ ಲ್ಯಾಲ, ಬೆಳ್ಳಿಯಪ್ಪ ಬೆಳಾಲು, ಮುಕುಂದ ಚಂದ್ರ ಪೆರಿಂಜೆ, ರಮೇಶ್ ಪೈಲಾರು, ಅಶ್ರಫ್ ಆಲಿ ಕುಂಞಿ ಮುಂಡಾಜೆ, ಲಾವಣ್ಯ ವಸಂತ್ ಬೆಳ್ತಂಗಡಿ ಮೊದಲಾದವರು ಪಾಲ್ಗೊಂಡಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ಸ್ವಾಗತಿಸಿ, ಪ್ರಮೀಳಾ ಬೆಳ್ತಂಗಡಿಯವರು ವಂದಿಸಿದರು.

Related posts

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!