July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಪೃಥ್ವಿ ಸಾನಿಕಂ ಅವರು 2022ರ ಜೂನ್ 28ರಿಂದ 2023ರ ಫೆಬ್ರವರಿ 2ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ ವಿಧಾನಸಭಾ ಚುನಾವಣೆಯ ಹಿನ್ನೆೆಲೆಯಲ್ಲಿ ಹರಿಹರಕ್ಕೆ ವರ್ಗಾವಣೆಗೊಂಡಿದ್ದರು. ಇವರ ವರ್ಗಾವಣೆಯ ಬಳಿಕ ಸಚ್ಚಿದಾನಂದ ಎಸ್. ಕುಚನೂರು ಬಳಿಕ ಟಿ.ಸುರೇಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿಯಲ್ಲಿ ತಾಲೂಕು ತಹಸೀಲ್ದಾರ್ ಮತ್ತು ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾಾರೆ. ಬೆಳ್ತಂಗಡಿ ತಾಲೂಕಿನ 52ನೇ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಲಿರುವ ಚಿತ್ರದುರ್ಗ ಜಿಲ್ಲೆೆಯ ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿಯೂ ಆಗಿದ್ದಾರೆ. ನಿರ್ಗಮಿತ ತಹಸೀಲ್ದಾರ್ ಟಿ.ಸುರೇಶ್ ಕುಮರ್ ಅವರು ಪೃಥ್ವಿ ಸಾನಿಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya
error: Content is protected !!