July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ ದಿಕ್ಷೀತ್ (20ವ) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾರೆ. ನ.23ರಂದು ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ವಿದ್ಯಾರ್ಥಿಯು ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕಿನ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Related posts

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya
error: Content is protected !!