ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ಸೌತಡ್ಕ ಕಾರ್ಯಕ್ಷೇತ್ರದಲ್ಲಿ “ಸಿರಿ” ಹೊಸ ಪ್ರಗತಿಗೊಂದು ಸಂಘವನ್ನು ಹಲ್ಲಿಂಗೇರಿ ಸಮುದಾಯ ಭವನದ ಅಧ್ಯಕ್ಷ ರಾಮಣ್ಣಗೌಡ ರವರು ದೀಪ ಪ್ರಜ್ವಲಿಸಿ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು.

ಈ ಸಂದರ್ಭ ಸಂಘದ ಸದಸ್ಯರಿಗೆ ಹೊಸ ನಿರ್ಣಯ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಹಾಗೂ ಸೌತಡ್ಕ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿಯಾದ ಕುಸುಮಾ ರವರು ಉಪಸ್ಥಿತರಿದ್ದರು. ಪ್ರೇಮ ಮತ್ತು ಗೀತಾರವರನ್ನು ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

Leave a Comment

error: Content is protected !!