25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

ಬೆಳ್ತಂಗಡಿ : ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಳ್ಳತನವಾಗಿದ್ದ ಓಮಿನಿ ಕಾರು ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ನ.21 ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಓಮಿನಿ ಕಾರನ್ನು ಚಿಕ್ಕಮಗಳೂರು ನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಲ್ಲಿಸಿದ KA-05-Z-7189 ಸಂಖ್ಯೆಯ ಓಮಿನಿ ಕಾರನ್ನು ನ.11 ರಂದು ಯಾರೋ ಕಳ್ಳರು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಾರು ಮಾಲೀಕ ವೆಂಕಟೇಶ್ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದರು. ಬಳಿಕ ಕಾರಿನ ಬಗ್ಗೆ ಮಾಲೀಕ ಸ್ನೇಹಿತರ ಮುಖಾಂತರ ಎಲ್ಲಾ ಕಡೆ ಸಾಮಾಜಿಕ ಜಾಲತಾಣಗಳಲ್ಲಿ ಕಳ್ಳತನವಾಗಿದ್ದ ಕಾರಿನ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ನ.21 ರಂದು ಸಂಜೆ ಉಜಿರೆಯ ಟಿ.ಬಿ.ಕ್ರಾಸ್ ಬಳಿಯ ರಸ್ತೆ ಬದಿಯಲ್ಲಿ ಧೂಳು ಹಿಡಿದ ರೀತಿಯಲ್ಲಿ ನಿಲ್ಲಿಸಿದ್ದು ಮಾಲೀಕನ ಸ್ನೇಹಿತರಿಗೆ ಕಂಡಿದ್ದು ತಕ್ಷಣ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಚಿಕ್ಕಮಗಳೂರು ನಗರ ಪೊಲೀಸರಿಗೆ ಮಾಲೀಕ ಮಾಹಿತಿ ನೀಡಿ ನಂತರ ಸ್ಥಳಕ್ಕೆ ಬಂದು ಬೆಳ್ತಂಗಡಿ ಸಂಚಾರಿ ಪೊಲೀಸರ ವಶಕ್ಕೆ ನೀಡಿದ್ದರು.ನಂತರ ಕಾನೂನು ಪ್ರಕ್ರಿಯೆ ಪೂರ್ತಿಗೊಳಿಸಲು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ನ.22 ರಂದು ಮಾಲೀಕ ವೆಂಕಟೇಶ್ ನೀಡಿದ್ದಾರೆ. ಕಾರು ಕಳ್ಳತನವಾದ ಬಳಿಕ ದೂರು ನೀಡಿ ಮಾಲೀಕನ ಕೆಲಸದ ನಡುವೆಯೂ ಕಠಿಣ ಶ್ರಮದಿಂದ ಗೆಳೆಯರ ಮೂಲಕ 10 ದಿನದಲ್ಲಿ ಓಮಿನಿ ಕಾರನ್ನು ಪತ್ತೆಹಚ್ಚಿ ಸಹಸ ಮೇರೆದಿದ್ದಾರೆ ವೆಂಕಟೇಶ್.

Related posts

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!