September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

ಬೆಳ್ತಂಗಡಿ : ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಳ್ಳತನವಾಗಿದ್ದ ಓಮಿನಿ ಕಾರು ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ನ.21 ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಓಮಿನಿ ಕಾರನ್ನು ಚಿಕ್ಕಮಗಳೂರು ನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಲ್ಲಿಸಿದ KA-05-Z-7189 ಸಂಖ್ಯೆಯ ಓಮಿನಿ ಕಾರನ್ನು ನ.11 ರಂದು ಯಾರೋ ಕಳ್ಳರು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಾರು ಮಾಲೀಕ ವೆಂಕಟೇಶ್ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದರು. ಬಳಿಕ ಕಾರಿನ ಬಗ್ಗೆ ಮಾಲೀಕ ಸ್ನೇಹಿತರ ಮುಖಾಂತರ ಎಲ್ಲಾ ಕಡೆ ಸಾಮಾಜಿಕ ಜಾಲತಾಣಗಳಲ್ಲಿ ಕಳ್ಳತನವಾಗಿದ್ದ ಕಾರಿನ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ನ.21 ರಂದು ಸಂಜೆ ಉಜಿರೆಯ ಟಿ.ಬಿ.ಕ್ರಾಸ್ ಬಳಿಯ ರಸ್ತೆ ಬದಿಯಲ್ಲಿ ಧೂಳು ಹಿಡಿದ ರೀತಿಯಲ್ಲಿ ನಿಲ್ಲಿಸಿದ್ದು ಮಾಲೀಕನ ಸ್ನೇಹಿತರಿಗೆ ಕಂಡಿದ್ದು ತಕ್ಷಣ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಚಿಕ್ಕಮಗಳೂರು ನಗರ ಪೊಲೀಸರಿಗೆ ಮಾಲೀಕ ಮಾಹಿತಿ ನೀಡಿ ನಂತರ ಸ್ಥಳಕ್ಕೆ ಬಂದು ಬೆಳ್ತಂಗಡಿ ಸಂಚಾರಿ ಪೊಲೀಸರ ವಶಕ್ಕೆ ನೀಡಿದ್ದರು.ನಂತರ ಕಾನೂನು ಪ್ರಕ್ರಿಯೆ ಪೂರ್ತಿಗೊಳಿಸಲು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ನ.22 ರಂದು ಮಾಲೀಕ ವೆಂಕಟೇಶ್ ನೀಡಿದ್ದಾರೆ. ಕಾರು ಕಳ್ಳತನವಾದ ಬಳಿಕ ದೂರು ನೀಡಿ ಮಾಲೀಕನ ಕೆಲಸದ ನಡುವೆಯೂ ಕಠಿಣ ಶ್ರಮದಿಂದ ಗೆಳೆಯರ ಮೂಲಕ 10 ದಿನದಲ್ಲಿ ಓಮಿನಿ ಕಾರನ್ನು ಪತ್ತೆಹಚ್ಚಿ ಸಹಸ ಮೇರೆದಿದ್ದಾರೆ ವೆಂಕಟೇಶ್.

Related posts

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya
error: Content is protected !!