25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

ಬೆಳ್ತಂಗಡಿ : ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಳ್ಳತನವಾಗಿದ್ದ ಓಮಿನಿ ಕಾರು ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ನ.21 ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಓಮಿನಿ ಕಾರನ್ನು ಚಿಕ್ಕಮಗಳೂರು ನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಲ್ಲಿಸಿದ KA-05-Z-7189 ಸಂಖ್ಯೆಯ ಓಮಿನಿ ಕಾರನ್ನು ನ.11 ರಂದು ಯಾರೋ ಕಳ್ಳರು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಾರು ಮಾಲೀಕ ವೆಂಕಟೇಶ್ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದರು. ಬಳಿಕ ಕಾರಿನ ಬಗ್ಗೆ ಮಾಲೀಕ ಸ್ನೇಹಿತರ ಮುಖಾಂತರ ಎಲ್ಲಾ ಕಡೆ ಸಾಮಾಜಿಕ ಜಾಲತಾಣಗಳಲ್ಲಿ ಕಳ್ಳತನವಾಗಿದ್ದ ಕಾರಿನ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ನ.21 ರಂದು ಸಂಜೆ ಉಜಿರೆಯ ಟಿ.ಬಿ.ಕ್ರಾಸ್ ಬಳಿಯ ರಸ್ತೆ ಬದಿಯಲ್ಲಿ ಧೂಳು ಹಿಡಿದ ರೀತಿಯಲ್ಲಿ ನಿಲ್ಲಿಸಿದ್ದು ಮಾಲೀಕನ ಸ್ನೇಹಿತರಿಗೆ ಕಂಡಿದ್ದು ತಕ್ಷಣ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಚಿಕ್ಕಮಗಳೂರು ನಗರ ಪೊಲೀಸರಿಗೆ ಮಾಲೀಕ ಮಾಹಿತಿ ನೀಡಿ ನಂತರ ಸ್ಥಳಕ್ಕೆ ಬಂದು ಬೆಳ್ತಂಗಡಿ ಸಂಚಾರಿ ಪೊಲೀಸರ ವಶಕ್ಕೆ ನೀಡಿದ್ದರು.ನಂತರ ಕಾನೂನು ಪ್ರಕ್ರಿಯೆ ಪೂರ್ತಿಗೊಳಿಸಲು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ನ.22 ರಂದು ಮಾಲೀಕ ವೆಂಕಟೇಶ್ ನೀಡಿದ್ದಾರೆ. ಕಾರು ಕಳ್ಳತನವಾದ ಬಳಿಕ ದೂರು ನೀಡಿ ಮಾಲೀಕನ ಕೆಲಸದ ನಡುವೆಯೂ ಕಠಿಣ ಶ್ರಮದಿಂದ ಗೆಳೆಯರ ಮೂಲಕ 10 ದಿನದಲ್ಲಿ ಓಮಿನಿ ಕಾರನ್ನು ಪತ್ತೆಹಚ್ಚಿ ಸಹಸ ಮೇರೆದಿದ್ದಾರೆ ವೆಂಕಟೇಶ್.

Related posts

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!