22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

ಬೆಳ್ತಂಗಡಿ : ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಳ್ಳತನವಾಗಿದ್ದ ಓಮಿನಿ ಕಾರು ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ನ.21 ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಓಮಿನಿ ಕಾರನ್ನು ಚಿಕ್ಕಮಗಳೂರು ನಗರ ಪೊಲೀಸರ ವಶಕ್ಕೆ ನೀಡಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಲ್ಲಿಸಿದ KA-05-Z-7189 ಸಂಖ್ಯೆಯ ಓಮಿನಿ ಕಾರನ್ನು ನ.11 ರಂದು ಯಾರೋ ಕಳ್ಳರು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಾರು ಮಾಲೀಕ ವೆಂಕಟೇಶ್ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದರು. ಬಳಿಕ ಕಾರಿನ ಬಗ್ಗೆ ಮಾಲೀಕ ಸ್ನೇಹಿತರ ಮುಖಾಂತರ ಎಲ್ಲಾ ಕಡೆ ಸಾಮಾಜಿಕ ಜಾಲತಾಣಗಳಲ್ಲಿ ಕಳ್ಳತನವಾಗಿದ್ದ ಕಾರಿನ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ನ.21 ರಂದು ಸಂಜೆ ಉಜಿರೆಯ ಟಿ.ಬಿ.ಕ್ರಾಸ್ ಬಳಿಯ ರಸ್ತೆ ಬದಿಯಲ್ಲಿ ಧೂಳು ಹಿಡಿದ ರೀತಿಯಲ್ಲಿ ನಿಲ್ಲಿಸಿದ್ದು ಮಾಲೀಕನ ಸ್ನೇಹಿತರಿಗೆ ಕಂಡಿದ್ದು ತಕ್ಷಣ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ಚಿಕ್ಕಮಗಳೂರು ನಗರ ಪೊಲೀಸರಿಗೆ ಮಾಲೀಕ ಮಾಹಿತಿ ನೀಡಿ ನಂತರ ಸ್ಥಳಕ್ಕೆ ಬಂದು ಬೆಳ್ತಂಗಡಿ ಸಂಚಾರಿ ಪೊಲೀಸರ ವಶಕ್ಕೆ ನೀಡಿದ್ದರು.ನಂತರ ಕಾನೂನು ಪ್ರಕ್ರಿಯೆ ಪೂರ್ತಿಗೊಳಿಸಲು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ನ.22 ರಂದು ಮಾಲೀಕ ವೆಂಕಟೇಶ್ ನೀಡಿದ್ದಾರೆ. ಕಾರು ಕಳ್ಳತನವಾದ ಬಳಿಕ ದೂರು ನೀಡಿ ಮಾಲೀಕನ ಕೆಲಸದ ನಡುವೆಯೂ ಕಠಿಣ ಶ್ರಮದಿಂದ ಗೆಳೆಯರ ಮೂಲಕ 10 ದಿನದಲ್ಲಿ ಓಮಿನಿ ಕಾರನ್ನು ಪತ್ತೆಹಚ್ಚಿ ಸಹಸ ಮೇರೆದಿದ್ದಾರೆ ವೆಂಕಟೇಶ್.

Related posts

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!