25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 18ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬ‌ರ್ 17ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ವಾಣಿ ಕಾಲೇಜಿನಲ್ಲಿ, ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಭೆಯಲ್ಲಿ ಸಮ್ಮೇಳನ ಸಂಯೋಜನಾ ಸಮಿತಿಯ ರಚನೆ ಜರಗಿದ್ದು ಅಧ್ಯಕ್ಷರಾಗಿ ಬೆಳ್ತಂಗಡಿ ನಗರ ಪಂಚಾಯತಿನ ನಿಕಟ ಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಬೆಳ್ತಂಗಡಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಸುವರ್ಣ ಆರ್ಕೇಡ್ ನ ಸಂಪತ್ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ಕೊಯ್ಯರು ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಮೋಹನ್ ಗೌಡ, ಕಾರ್ಯದರ್ಶಿಯಾಗಿ ವಾಣಿ ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಕೋಶಾಧ್ಯಕ್ಷರಾಗಿ ಮೀನಾಕ್ಷಿ ಎಂ ಗುರುವಾಯನಕೆರೆ ಇವರು ಆಯ್ಕೆಯಾದರು.

ಸಮಿತಿಯ ಅಧ್ಯಕ್ಷರಾದ ಜಯಾನಂದ ಗೌಡರವರು ಮಾತನಾಡುತ್ತಾ, ವಾಣಿ ಕಾಲೇಜಿಗೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಯ ಅವಕಾಶ ಸಿಕ್ಕಿರುವುದು ಬಹಳ ಸಂತೋಷ. ಸಮ್ಮೇಳನದ ಯಶಸ್ಸಿನ ಹಿನ್ನೆಲೆಯಲ್ಲಿ ಸರ್ವರೂ ಸಹಕಾರ ಮಾರ್ಗದರ್ಶನವನ್ನು ನೀಡಿ, ಸಮ್ಮೇಳನವು ಅರ್ಥಪೂರ್ಣವಾಗಿ ಜರಗುವಂತೆ ಮಾಡೋಣವೆಂದು ಆಶಿಸಿದರು.

ಈ ಸಂದರ್ಭದಲ್ಲಿ ಸಮ್ಮೇಳನದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು.ಉದ್ಘಾಟನೆ, ಸಮಾರೋಪ, ಗೋಷ್ಠಿಗಳು, ವಿವಿಧ ಉಪ ಸಮಿತಿಗಳ ರಚನೆ ಹಾಗೂ ಇತರ ಕಾರ್ಯಕ್ರಮಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು .

ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಯಿತು.ಸಮ್ಮೇಳನದ ಪೂರ್ಣ ಚಿತ್ರಣ ಒಂದು ವಾರದೊಳಗೆ ಪ್ರಕಟಿಸುವ ಬಗ್ಗೆ ಅಭಿಪ್ರಾಯ ಪಡೆಲಾಯಿತು. ಸಮ್ಮೇಳನದ ಸಂಯೋಜನ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕರಾದ ಹರೀಶ್ ಪೂಂಜರವರನ್ನು ವಿನಂತಿಸುವುದೆಂದು ನಿರ್ಣಯಿಸಲಾಯಿತು.

ಸಭೆಯಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಬಿ. ಲಕ್ಷ್ಮಣ ಪೂಜಾರಿ ಲಾಯಿಲ, ವಸಂತಿ ಮುಂಡಾಜೆ, ಪ್ರಸನ್ನ ಪಿಯು ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ, ಗುರುದೇವ ಪಿಯು ಕಾಲೇಜಿನ ಗಣೇಶ್ ಶಿರ್ಲಾಲು, ಬೆಳ್ತಂಗಡಿ ಜೇಸೀಐ ಅಧ್ಯಕ್ಷರಾದ ಜೇಸೀ ಶಂಕರ ರಾವ್, ಅನುರಾಧ ರಾವ್ ಬೆಳ್ತಂಗಡಿ, ಮಹಾಬಲ ಗೌಡ ಗುರುವಾಯನಕೆರೆ, ಬೆಳ್ಳಿಯಪ್ಪ ಗೌಡ ಬೆಳಾಲು, ವಿಷ್ಣು ಪ್ರಕಾಶ್ ಬೆಳ್ತಂಗಡಿ ಮೊದಲಾದವರು ಉಪಸ್ಥಿತರಿದ್ದರು.

ವಾಣಿ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಲಕ್ಷ್ಮೀನಾರಾಯಣರವರು ಸ್ವಾಗತಿಸಿ, ಉಪನ್ಯಾಸಕಿ ಮೀನಾಕ್ಷಿ ವಂದಿಸಿದರು.ರಾಮಕೃಷ್ಣ ಭಟ್ ಬೆಳಾಲುರವರು ಸಭೆಯನ್ನು ನಿರ್ವಹಿಸಿದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!