24 C
ಪುತ್ತೂರು, ಬೆಳ್ತಂಗಡಿ
April 3, 2025
ನಿಧನವರದಿ

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ಕಾರ್ಮಿಕನೋರ್ವ ವಿದ್ಯುತ್‌ಶಾಕ್‌ಗೆ ಒಳಗಾಗಿ ಸಾವನ್ನಪ್ಪಿದ ದಾರುಣ ಘಟನೆ ನ.24ರಂದು ಬೆಳಿಗ್ಗೆ ಸಂಭವಿಸಿದೆ.

ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (49ವ) ಈ ದುರ್ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇಂದು ಬೆಳಿಗ್ಗೆ ಸ್ಥಳೀಯ ಬೊಮ್ಮಣ್ಣ ಗೌಡ ಎಂಬವರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು, ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್‌ಲೈನ್‌ಗೆ ತಾಗಿ ವಿದ್ಯುತ್‌ಶಾಕ್ ತಗಲಿ, ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ, ಯಾವುದೇ ಪ್ರಯೋಜನವಾಗದೆ ಅವರು ದಾರಿ ಮಧ್ಯೆ ಮೃತಪಟ್ಟರೆಂದು ವರದಿಯಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya
error: Content is protected !!