22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನವರದಿ

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

ಧರ್ಮಸ್ಥಳ: ಇಲ್ಲಿಯ ಮಲ್ಲರ್ಮಾಡಿ ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ, ಕಾರ್ಮಿಕನೋರ್ವ ವಿದ್ಯುತ್‌ಶಾಕ್‌ಗೆ ಒಳಗಾಗಿ ಸಾವನ್ನಪ್ಪಿದ ದಾರುಣ ಘಟನೆ ನ.24ರಂದು ಬೆಳಿಗ್ಗೆ ಸಂಭವಿಸಿದೆ.

ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (49ವ) ಈ ದುರ್ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇಂದು ಬೆಳಿಗ್ಗೆ ಸ್ಥಳೀಯ ಬೊಮ್ಮಣ್ಣ ಗೌಡ ಎಂಬವರ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದು, ತೋಟದಲ್ಲಿ ಸೊಪ್ಪು ಕಡಿಯಲು ಅಲ್ಯೂಮಿನಿಯಂ ಏಣಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತೋಟದ ನಡುವಿನಲ್ಲಿ ಹಾದುಹೋಗಿದ್ದ ವಿದ್ಯುತ್‌ಲೈನ್‌ಗೆ ತಾಗಿ ವಿದ್ಯುತ್‌ಶಾಕ್ ತಗಲಿ, ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ, ಯಾವುದೇ ಪ್ರಯೋಜನವಾಗದೆ ಅವರು ದಾರಿ ಮಧ್ಯೆ ಮೃತಪಟ್ಟರೆಂದು ವರದಿಯಾಗಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya
error: Content is protected !!