22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

ಬೆಳ್ತಂಗಡಿ: ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಮನ್ನಣೆ ದೊರೆತಿದೆ. ಅಮೇರಿಕಾದ ಫಿನಿಕ್ಸ್‌ನ ಪುತ್ತಿಗೆ ಮಠದ ಪೀಠಾದಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅವರ ಮೂರನೇ ಬಾರಿಯ ಅಮೇರಿಕಾ ಕಲಾ ಪ್ರವಾಸದ ವೇಳೆ ನೀಡಿದ ಕಲಾ ಸೇವೆಯನ್ನು ಗೌರವಿಸಿ ಈ ಪುರಸ್ಕಾರ ಪತ್ರ‌ ನೀಡಿ ಅಭಿನಂದಿಸಿದರು.

ಅಮೆರಿಕಾದ ಅರಿಝೇನಾ ಎಂಬಲ್ಲಿರುವ ಸುಜ್ಞಾನ ರಿಲಿಜಿಯಸ್ ಎಂಡ್ ಚಾರಿಟೇಬಲ್ ಫೌಂಡೇಶನ್ ವೆಂಕಟಕೃಷ್ಣ ದೇವಸ್ಥಾನದಲ್ಲಿ ಅ.28 ರಿಂದ ನ.4 ರ ವರೆಗೆ ನಡೆದ ‘ ಶ್ರೀ ಯಜುರ್ವೇದ ಸಂಹಿತ ಯಾಗ’ ಮತ್ತು ‘ಸಹಸ್ರ ಅತರ್ವ ಶ್ರೀರ್ಶ ಮಹಾಗಣಪತಿ ಯಾಗ’ ಕಾರ್ಯಕ್ರಮದಲ್ಲಿ ಪ್ರಕಾಶ ದೇವಾಡಿಗ ಅವರು ಭಾರತೀಯ ಸಾಂಪ್ರದಾಯಿಕ ಸ್ಯಾಕ್ಸೋಫೋನ್ ವಾದನವನ್ನು ಮನೋಜ್ಞವಾಗಿ ನಡೆಸಿಕೊಟ್ಟಿದ್ದರು.ಅವರು ಈ ಬಾರಿ ಭಾರತದಿಂದ ಆಹ್ವಾನಿತರಾಗಿ ಅಮೆರಿಕಕ್ಕೆ ಮೂರನೇ ಬಾರಿಗೆ ಪ್ರಯಾಣ ಕೈಗೊಂಡಿದ್ದರು. ಸ್ವಾಮೀಜಿಗಳು ಪುರಸ್ಕಾರ ಪ್ರದಾನ‌ ಮಾಡುವ ವೇಳೆ ಮಠದ ಪ್ರಧಾನ ಅರ್ಚಕ ಕಿರಣ್ ರಾವ್‌ ಉಜಿರೆ ಹಾಗೂ ಸ್ವಾಮೀಜಿಗಳ ಧಾರ್ಮಿಕ ಕೈಂಕರ್ಯದ ಪರಿವಾರ ಬಂಧುಗಳು ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya
error: Content is protected !!