25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

ಬೆಳ್ತಂಗಡಿ: ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಮನ್ನಣೆ ದೊರೆತಿದೆ. ಅಮೇರಿಕಾದ ಫಿನಿಕ್ಸ್‌ನ ಪುತ್ತಿಗೆ ಮಠದ ಪೀಠಾದಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅವರ ಮೂರನೇ ಬಾರಿಯ ಅಮೇರಿಕಾ ಕಲಾ ಪ್ರವಾಸದ ವೇಳೆ ನೀಡಿದ ಕಲಾ ಸೇವೆಯನ್ನು ಗೌರವಿಸಿ ಈ ಪುರಸ್ಕಾರ ಪತ್ರ‌ ನೀಡಿ ಅಭಿನಂದಿಸಿದರು.

ಅಮೆರಿಕಾದ ಅರಿಝೇನಾ ಎಂಬಲ್ಲಿರುವ ಸುಜ್ಞಾನ ರಿಲಿಜಿಯಸ್ ಎಂಡ್ ಚಾರಿಟೇಬಲ್ ಫೌಂಡೇಶನ್ ವೆಂಕಟಕೃಷ್ಣ ದೇವಸ್ಥಾನದಲ್ಲಿ ಅ.28 ರಿಂದ ನ.4 ರ ವರೆಗೆ ನಡೆದ ‘ ಶ್ರೀ ಯಜುರ್ವೇದ ಸಂಹಿತ ಯಾಗ’ ಮತ್ತು ‘ಸಹಸ್ರ ಅತರ್ವ ಶ್ರೀರ್ಶ ಮಹಾಗಣಪತಿ ಯಾಗ’ ಕಾರ್ಯಕ್ರಮದಲ್ಲಿ ಪ್ರಕಾಶ ದೇವಾಡಿಗ ಅವರು ಭಾರತೀಯ ಸಾಂಪ್ರದಾಯಿಕ ಸ್ಯಾಕ್ಸೋಫೋನ್ ವಾದನವನ್ನು ಮನೋಜ್ಞವಾಗಿ ನಡೆಸಿಕೊಟ್ಟಿದ್ದರು.ಅವರು ಈ ಬಾರಿ ಭಾರತದಿಂದ ಆಹ್ವಾನಿತರಾಗಿ ಅಮೆರಿಕಕ್ಕೆ ಮೂರನೇ ಬಾರಿಗೆ ಪ್ರಯಾಣ ಕೈಗೊಂಡಿದ್ದರು. ಸ್ವಾಮೀಜಿಗಳು ಪುರಸ್ಕಾರ ಪ್ರದಾನ‌ ಮಾಡುವ ವೇಳೆ ಮಠದ ಪ್ರಧಾನ ಅರ್ಚಕ ಕಿರಣ್ ರಾವ್‌ ಉಜಿರೆ ಹಾಗೂ ಸ್ವಾಮೀಜಿಗಳ ಧಾರ್ಮಿಕ ಕೈಂಕರ್ಯದ ಪರಿವಾರ ಬಂಧುಗಳು ಉಪಸ್ಥಿತರಿದ್ದರು.

Related posts

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!